ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ, 6 ವರ್ಷದ ಮಗುವಿನ ರೇಪ್!

By Suvarna NewsFirst Published Jun 27, 2022, 9:38 AM IST
Highlights

* ಹರಿದ್ವಾರದ ರೂರ್ಕಿಯಲ್ಲಿ ಶಾಕಿಂಗ್ ಘಟನೆ

* ಲಿಫ್ಟ್‌ ಕೊಡುವುದಾಗಿ ಹೇಳಿ ತಾಯಿ, ಮಗುವನ್ನು ಕಾರು ಹತ್ತಿಸಿದ ಕಾಮುಕರು

* ಚಲಿಸುತ್ತಿದ್ದ ಕಾರಿನಲ್ಲಿ ತಾಯಿ, ಮಗುವಿನ ಅತ್ಯಾಚಾರ

ಡೆಹ್ರಾಡೂನ್(ಜೂ.27): ಹರಿದ್ವಾರದ ರೂರ್ಕಿಯಲ್ಲಿ ಶಾಕಿಂಗ್ ಘಟನೆಯೊಂದು ವರದಿಯಾಗಿದೆ. ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳನ್ನು ಲಿಫ್ಟ್ ಕೊಡುವುದಾಗಿ ಹೇಳಿ ಹತ್ತಿಸಿಕೊಂಡ ವ್ಯಕ್ತಿ ಮತ್ತು ಅವನ ಸ್ನೇಹಿತರು ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಮುಸ್ಲಿಂ ಧಾರ್ಮಿಕ ಸ್ಥಳವಾದ ಪಿರಾನ್ ಕಲಿಯಾರ್‌ನಿಂದ ಮನೆಗೆ ಹೋಗುತ್ತಿದ್ದಾಗ ಸೋನು ಎಂಬ ವ್ಯಕ್ತಿ ಲಿಫ್ಟ್ ನೀಡಿದ್ದಾನೆ ಎಂದು ಅವರು ಹೇಳಿದರು.

ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಪ್ರಮೇಂದ್ರ ದೋವಲ್ ಮಾತನಾಡಿ, ವ್ಯಕ್ತಿಯ ಕೆಲವು ಸ್ನೇಹಿತರು ಮೊದಲೇ ಕಾರಿನಲ್ಲಿದ್ದರು. ದೂರಿನ ಪ್ರಕಾರ, ಸೋನು ಮತ್ತು ಆತನ ಸಹಚರರು ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ಕಾಲುವೆಯ ಬಳಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ಅಲ್ಲಿಂದ ಮಧ್ಯರಾತ್ರಿ ಪೊಲೀಸ್ ಠಾಣೆಗೆ ತಲುಪಿ ಪೊಲೀಸರಿಗೆ ಘಟನೆಯನ್ನು ವಿವರಿಸಿದ್ದಾರೆ.

ದಾವಣಗೆರೆ: ಅತ್ಯಾಚಾರವೆಸಗಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಕಾಮುಕ ಆರೆಸ್ಟ್‌

ಪೊಲೀಸರ ಪ್ರಕಾರ, ಕಾರಿನಲ್ಲಿ ಎಷ್ಟು ಪುರುಷರು ಇದ್ದರು ಎಂದು ಮಹಿಳೆಗೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ, ಆದರೆ ಅದನ್ನು ಚಲಾಯಿಸುತ್ತಿದ್ದ ವ್ಯಕ್ತಿಯ ಹೆಸರು ಸೋನು ಎಂದು ಹೇಳಿದ್ದಾರೆ. ಇಬ್ಬರನ್ನು ರೂರ್ಕಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಯಸಿ ಊರಿಗೆ ತೆರಳಿ ಯುವಕ ಆತ್ಮಹತ್ಯೆ: ಬೆಂಗ್ಳೂರಿನ ಪ್ರೀತಿ ಸೊರಬದಲ್ಲಿ ಅಂತ್ಯ

ಪ್ರೀತಿಯಲ್ಲಿ ಮೋಸ ಹೋಗಿದಕ್ಕೆ ಯುವಕನೊಬ್ಬ ಮನನೊಂದು ಸೆಲ್ಫಿ ವಿಡಿಯೋ ಮಾಡಿಟ್ಟು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸಿಕೆರೆಯ ನಿವಾಸಿ ದಿಲೀಪ್ ಮೃತ ಯುವಕ. ಕೆಲ‌ ವರ್ಷಗಳಿಂದ ದಿಲೀಪ್​ ಕುಟುಂಬ ಬೆಂಗಳೂರಿನಲ್ಲಿ ವಾಸವಿದೆ. ದಿಲೀಪ್ ಮತ್ತು ಕುಟುಂಬಸ್ಥರು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಗಾರ್ಮೆಂಟ್ಸ್​ನಲ್ಲಿ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿತ್ತು.

ಹೀಗೆ ದಿಲೀಪ್ ಮತ್ತು ಯುವತಿ ಇಬ್ಬರು ಸಹ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.  ನಂತರ ಯುವತಿ ಪ್ರೀತಿ ಮಾಡೋದಕ್ಕೆ ನಿರಾಕರಿಸಿದ್ದಾಳೆ. ಅಲ್ಲದೆ, ದಿಲೀಪ್‌ನಿಂದ ಅಂತರ ಕಾಯ್ದುಕೊಂಡಿದ್ದಾಳೆ. ಇದರಿಂದ ಮನನೊಂದು ದಿಲೀಪ್​  ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾನೆ.

ಯುವತಿ ವಾಸವಿರುವ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಿಯರು ಆಕಸ್ಮಿಕವಾಗಿ ದಿಲೀಪ್​ ಬಿದ್ದಿರುವುದನ್ನು ನೋಡಿದ್ದಾರೆ. ಪಕ್ಕದಲ್ಲೇ ವಿಷದ ಬಾಟಲಿಯನ್ನು ನೋಡಿ ತಕ್ಷಣ ದಿಲೀಪ್​ನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಅಷ್ಟೊತ್ತಿಗೆ ದಿಲೀಪ್ ಜೀವ ಹೋಗಿದೆ. 

click me!