ಕೊನೆಯ ಕ್ಷಣದ ಭೀಕರ ದೃಶ್ಯ, ಏಕಾಏಕಿ ಹೆಚ್ಚಾದ ನೀರಿನಲ್ಲಿ ಕೊಚ್ಚಿ ಹೋದ 4 ಮಕ್ಕಳು, ಮಹಿಳೆ!

Published : Jun 30, 2024, 09:43 PM ISTUpdated : Jun 30, 2024, 09:44 PM IST
ಕೊನೆಯ ಕ್ಷಣದ ಭೀಕರ ದೃಶ್ಯ, ಏಕಾಏಕಿ ಹೆಚ್ಚಾದ ನೀರಿನಲ್ಲಿ ಕೊಚ್ಚಿ ಹೋದ 4 ಮಕ್ಕಳು, ಮಹಿಳೆ!

ಸಾರಾಂಶ

ಲೋನವಾಲದ ಸಮೀಪದ ಬುಶಿ ಡ್ಯಾಮ್ ಪಕ್ಕದ ಪ್ರವಾಸಿ ತಾಣಕ್ಕೆ ತೆರಳಿದ ಒಂದೇ ಕುಟುಂಬದ ಐವರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡದಿದೆ. ಸಾವಿನ ಕೊನೆಯ ಕ್ಷಣದ ವಿಡಿಯೋ ಬೆಚ್ಚಿ ಬೀಳಿಸುವಂತಿದೆ.  

ಲೋನವಾಲ(ಜೂ.30) ಭಾನುವಾರದ ರಜಾ ದಿನವನ್ನು ಪ್ರವಾಸಿ ತಾಣದಲ್ಲಿ ಕಳೆಯಲು ಹೋದ ಕುಟುಂಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ಲೋನವಾಲದಲ್ಲಿ ನಡೆದಿದೆ. ಭುಶಿ ಡ್ಯಾಮ್ ಪಕ್ಕದ ಪ್ರಸಿದ್ದ ಪ್ರವಾಸಿ ತಾಣದಲ್ಲಿ ಜಲಪಾತ ಸೇರಿದಂತೆ ಪ್ರಕೃತಿ ಸೌಂದರ್ಯದಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಮಹಿಳೆ ತನ್ನ ನಾಲ್ವರು ಮಕ್ಕಳನ್ನು ಕರೆದುಕೊಂಡು ಇದೇ ಪ್ರದೇಶಕ್ಕೆ ತೆರಳಿದ್ದಾರೆ. ಆದರೆ ಏಕಾಏಕಿ ಡ್ಯಾಮ್ ನೀರು ತುಂಬಿ ಹರಿದಿದೆ. ಇದರ ಪರಿಣಾಮ ಮಹಿಳ ಸೇರಿದಂತೆ ನಾಲ್ವರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಮಹಿಳೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮಕ್ಕಳ ಮೃತದೇಹಕ್ಕೆ ಶೋಧ ಕಾರ್ಯ ಮುಂದುವರಿದಿದೆ.

ಲೋನವಾಲದ ಭುಶಿ ಡ್ಯಾಮ್ ಪಕ್ಕದ ಪ್ರವಾಸಿ ತಾಣದಲ್ಲಿ ಭಾರಿ ಜನಸಾಗರವೇ ಸೇರಿತ್ತು. 36 ವರ್ಷದ ಮಹಿಳೆ ತನ್ನ ನಾಲ್ವರು ಮಕ್ಕಳನ್ನು ಕರೆದುಕೊಂಡು ಇದೇ ಪ್ರವಾಸಿ ತಾಣಕ್ಕೆ ತೆರಳಿದ್ದಾರೆ. ಎಲ್ಲರಂತೆ ಮಹಿಳೆ ಹಾಗೂ ಮಕ್ಕಳು ಡ್ಯಾಮ್ ನೀರಿನಿಂದ ಕೆಲಭಾಗದಲ್ಲಿ ಸೃಷ್ಟಿಯಾಗುವ ಜಲಪಾತ ವೀಕ್ಷಿಸುತ್ತಾ, ನೀರಿನಲ್ಲಿ ಆಟವಾಡುತ್ತಾ ಕಾಲ ಕಳೆದಿದ್ದಾರೆ. ಆದರೆ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಡ್ಯಾಮ್‌ಗೆ ಏಕಾಏಕಿ ನೀರು ಹರಿದು ಬಂದಿದೆ.

ನದಿ ದಾಟುತ್ತಿದ್ದ ವೇಳೆ ಆರ್ಮಿ ಟ್ಯಾಂಕ್‌ ಮಗುಚಿ ದುರಂತ: ಪ್ರವಾಹದಲ್ಲಿ ಕೊಚ್ಚಿ ಹೋದ ಐವರು ಯೋಧರು

ನೀರಿನಲ್ಲಿ ಆಟವಾಡುತ್ತಿದ್ದ ಮಹಿಳೆ ಸೇರಿ ನಾಲ್ವರು ಮಕ್ಕಳು ಪ್ರಾಣ ಉಳಿಸಲು ಸತತವಾಗಿ ಹೋರಾಡಿದ್ದಾರೆ. ಸಹಾಯಕ್ಕಾಗಿ ಕಿರುಚಾಡಿದ್ದಾರೆ. ಆದರೆ ದಡದಲ್ಲಿದ್ದವರು ಏನೂ ಮಾಡಲಾಗದ ಪರಿಸ್ಥಿತಿ. ನೀರಿನ ರಭಸ ಹೆಚ್ಚಾಗುತ್ತಿದ್ದಂತೆ ಮಹಿಳೆ ಸೇರಿ ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಕೊನೆಯ ಕ್ಷಣದ ವಿಡಿಯೋ ಸೆರೆಯಾಗಿದೆ. 

ಈ ಪೈಕಿ ಮಹಿಳೆ, 13 ವರ್ಷ ಹಾಗೂ 8 ವರ್ಷದ ಇಬ್ಬರು ಹೆಣ್ಣುಮಕ್ಕಳ ಮೃತದೇಹ ಪತ್ತೆಯಾಗಿದೆ. ಆದರೆ 9 ವರ್ಷದ ಬಾಲಕ ಹಾಗೂ 4 ವರ್ಷಗದ ಹೆಣ್ಣು ಮಗು ಪತ್ತೆಯಾಗಿಲ್ಲ. ಘಟನೆ ನಡೆದ ಮಾಹಿತಿ ಸಿಕ್ಕ ಬೆನ್ನಲ್ಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಮೂವರ ಮೃತದೇಹ ಪತ್ತೆ ಹಚ್ಚಿ ಹೊರಕ್ಕೆ ತಗೆಯಲಾಗಿದೆ. ಅಷ್ಟರವೇಳೆ ಕತ್ತಲಾದ ಕಾರಣ ಶೋಧ ಕಾರ್ಯ ಸ್ಥಗಿತಗೊಂಡಿದೆ. ಶೋಧ ಕಾರ್ಯ ನಾಳೆ ಮುಂದುವರಿಯಲಿದೆ. 

 

 

ಮಧ್ಯಾಹ್ನ 1.30ರ ವೇಳೆಗೆ ಈ ಘಟನೆ ನಡೆದಿದೆ. ಇತ್ತ ಲೋನವಾಲ ಅಧಿಕಾರಿಗಳು ಇದೀಗ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧ ವಿಧಿಸಿದ್ದರೆ. ಇದರ ಜೊತೆಗೆ ಲೋನವಾಲದಲ್ಲಿರುವ ಹಲವು ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲು ಚರ್ಚಿಸಾಗಿದೆ. ಇದೇ ವೇಳೆ ನೀರು, ಜಲಾಪತದ ಕಡೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.  

88 ವರ್ಷಗಳ ದಾಖಲೆ ಮಳೆಗೆ ನವದೆಹಲಿ ತತ್ತರ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ