ಬೆಂಗಳೂರು: ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟ, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಹಿಳೆ ಅರೆಸ್ಟ್‌

Published : Oct 24, 2023, 09:56 AM IST
ಬೆಂಗಳೂರು: ಗುದದ್ವಾರದಲ್ಲಿ ಅಕ್ರಮ ಚಿನ್ನ ಸಾಗಾಟ, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಮಹಿಳೆ ಅರೆಸ್ಟ್‌

ಸಾರಾಂಶ

ಮಲೇಷ್ಯಾದ ಕೌಲಾಲಂಪುರದಿಂದ ಆಗಮಿಸಿದ ಮಹಿಳೆ 30ಕ್ಕೂ ಲಕ್ಷ ಮೌಲ್ಯದ 578 ಗ್ರಾಂ ಚಿನ್ನವನ್ನು ಗುದದ್ವಾರದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ. ಮಹಿಳೆಯ ಚಲನವಲನಗಳನ್ನು ಗಮನಿಸಿದಾಗ ಅನುಮಾನ ಗೊಂಡ ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆ. 

ವರದಿ-  ರವಿಕುಮಾರ್.ವಿ, ಏಷ್ಯಾನೆಟ್ ಸುವರ್ಣ ನ್ಯೂಸ್

ದೇವನಹಳ್ಳಿ(ಅ.24): ಕೆಂಪೇಗೌಡ ಏರ್‌ಪೋರ್ಟ್‌ನ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ  ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮಲೇಷ್ಯಾ, ಕುವೈತ್, ಕೊಲಂಬೋ ನಗರಗಳಿಂದ ಆಗಮಿಸಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚಿ ಪರಿಶೀಲಿಸಿದಾಗ ಅಪಾರ ಪ್ರಮಾಣದ ಚಿನ್ನ ಸಿಕ್ಕಿದೆ. ಕಳ್ಳರು ಚಾಪೆ ಕೆಳಗೆ ತೂರಿದರೆ, ಕಸ್ಟಮ್ಸ್ ಅಧಿಕಾರಿಗಳು ರಂಗೋಲಿ ಕೆಳಗಡೆ ತೂರಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. 

ಬ್ಲೌಸ್ ಪೀಸ್‌ನಲ್ಲಿ ಚಿನ್ನ ಸಾಗಾಟ

ಹೌದು, ಕೌಲಾಲಂಪುರದಿಂದ ಆಗಮಿಸಿದ ಮಹಿಳೆ ಬ್ಲೌಸ್ ಪೀಸ್‌ನಲ್ಲಿ ಚಿನ್ನದ ಪೇಸ್ಟ್‌ಅನ್ನು ಅಂಟಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ಏರ್‌ಪೋರ್ಟ್‌ನ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. 17 ಲಕ್ಷ 300 ಗ್ರಾಂ ಚಿನ್ನದ ಪೇಸ್ಟನ್ನು ಬ್ಲೌಸ್ ಪೀಸ್‌ನಲ್ಲಿ  ಅಂಟಿಸಿಕೊಂಡು ಬರಲಾಗಿತ್ತು.

ತುಮಕೂರಿನಲ್ಲಿ ರೌಡಿಶೀಟರ್ ಪೊಲಾರ್ಡ್‌ ಬರ್ಬರ ಹತ್ಯೆ

ಡ್ರೈ ಫ್ರೂಟ್ಸ್‌ನಲ್ಲಿ ಚಿನ್ನ ಮರೆಮಾಚಿ ಸಾಗಾಟ

ಕುವೈತ್‌ನಿಂದ ಆಗಮಿಸಿದ ಮಹಿಳೆ ಡ್ರೈ ಫ್ರೂಟ್ ಪಾಕೆಟ್‌ನಲ್ಲಿ ಸುಮಾರು 15 ಲಕ್ಷ ಮೌಲ್ಯದ ಚಿನ್ನದ ತುಂಡುಗಳನ್ನು ಮಿಕ್ಸ್ ಮಾಡಿಕೊಂಡು ಬಂದಿದ್ದಾರೆ. ಆಕೆಯ ಬ್ಯಾಗನ್ನು ಪರಿಶೀಲಿಸಿದಾಗ ಈ ಪಾಕೆಟ್ ನಲ್ಲಿ ಚಿನ್ನದ ತುಂಡುಗಳು ಇರುವುದು ಪತ್ತೆಯಾಗಿದೆ.

ಗುದದ್ವಾರದಲ್ಲಿ ಅರ್ಧ ಕೆಜಿ ಚಿನ್ನ ಸಾಗಾಟ 

ಮಲೇಷ್ಯಾದ ಕೌಲಾಲಂಪುರದಿಂದ ಆಗಮಿಸಿದ ಮಹಿಳೆ 30ಕ್ಕೂ ಲಕ್ಷ ಮೌಲ್ಯದ 578 ಗ್ರಾಂ ಚಿನ್ನವನ್ನು ಗುದದ್ವಾರದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ. ಮಹಿಳೆಯ ಚಲನವಲನಗಳನ್ನು ಗಮನಿಸಿದಾಗ ಅನುಮಾನ ಗೊಂಡ ಕಸ್ಟಮ್ಸ್ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!