ಹಣ, ಚಿನ್ನಕ್ಕಾಗಿ ಚಿಕ್ಕಮ್ಮನನ್ನೇ ಕೊಂದ ಅಕ್ಕನ ಮಗಳು..!

Kannadaprabha News   | Asianet News
Published : Mar 10, 2021, 07:37 AM IST
ಹಣ, ಚಿನ್ನಕ್ಕಾಗಿ ಚಿಕ್ಕಮ್ಮನನ್ನೇ ಕೊಂದ ಅಕ್ಕನ ಮಗಳು..!

ಸಾರಾಂಶ

ಯೋಗಕ್ಷೇಮ ವಿಚಾರಿಸುವ ನೆಪದಲ್ಲಿ ಹತ್ಯೆ| ಆನೇಪಾಳ್ಯದ ನಿವಾಸಿ ಶಬಾನಾ ಭಾನು ಬಂಧಿತ ಆರೋಪಿತೆ|  . ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆರೋಪಿ| ಹಣಕ್ಕಾಗಿ ಚಿಕ್ಕಮ್ಮನ ಆಭರಣ ಕಳ್ಳತನ ಸಂಚು ರೂಪಿಸಿದ್ದ ಚಾಲಾಕಿ ಮಹಿಳೆ| 

ಬೆಂಗಳೂರು(ಮಾ.10): ಇತ್ತೀಚೆಗೆ ಆನೇಪಾಳ್ಯದಲ್ಲಿ ನಡೆದಿದ್ದ ದಿಲ್ಷಾನ್‌ ಭಾನು (62) ಕೊಲೆ ಪ್ರಕರಣ ಸಂಬಂಧ ಮೃತಳ ಅಕ್ಕನ ಮಗಳನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆನೇಪಾಳ್ಯದ ನಿವಾಸಿ ಶಬಾನಾ ಭಾನು (29) ಬಂಧಿತಳಾಗಿದ್ದು, ಹಣಕ್ಕಾಗಿ ತನ್ನ ಚಿಕ್ಕಮ್ಮನ್ನು ಕೊಂದಿದ್ದಾಗಿ ಆಕೆ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆನೇಪಾಳ್ಯದಲ್ಲಿ ಪುತ್ರನ ಕುಟುಂಬದ ಜತೆ ದಿಲ್ಷಾನ್‌ ಭಾನು ನೆಲೆಸಿದ್ದರು. ಟೆಂಪೋ ಚಾಲಕನಾಗಿರುವ ಅವರ ಮಗ, ಮಾ.4ರಂದು ತೆಂಗಿನ ಕಾಯಿ ಸಾಗಿಸಲು ಚನ್ನರಾಯನಪಟ್ಟಣ ತಾಲೂಕಿನ ಹಿರಿಸಾವೆಗೆ ತೆರಳಿದ್ದರು. ಅದೇ ದಿನ ಕೊರಟೆಗೆರೆ ತಾಲೂಕಿನಲ್ಲಿರುವ ತವರು ಮನೆಗೆ ಮೃತರ ಸೊಸೆ ಮತ್ತು ಮೊಮ್ಮಕ್ಕಳು ಹೋಗಿದ್ದರು. ಈ ಸಮಯ ನೋಡಿಕೊಂಡು ಶಬಾನಾ ಭಾನು, ಚಿಕ್ಕಮ್ಮನ ಯೋಗಕ್ಷೇಮ ವಿಚಾರಿಸುವ ನೆಪದಲ್ಲಿ ಮನೆಗೆ ಬಂದು ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಹುಡುಗಿ ವಿಚಾರಕ್ಕೆ ಸ್ಟುಡೆಂಟ್ಸ್ ಗಲಾಟೆ? ಬಿಡಿಸಲು ಹೋದವನೆ ಕೊಲೆಯಾದ

ಆನೇಪಾಳ್ಯದ 3ನೇ ಅಡ್ಡರಸ್ತೆಯಲ್ಲಿ ಆರೋಪಿ ಕುಟುಂಬ ನೆಲೆಸಿದೆ. ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಆರೋಪಿ, ಹಣಕ್ಕಾಗಿ ಚಿಕ್ಕಮ್ಮನ ಆಭರಣ ಕಳ್ಳತನ ಸಂಚು ರೂಪಿಸಿದ್ದಳು. ಅಂತೆಯೇ ಮಾ.4ರಂದು ಮನೆಯಲ್ಲಿ ಚಿಕ್ಕಮ್ಮ ಒಬ್ಬಳೇ ಇದ್ದಾಳೆ ಎಂದು ಖಚಿತಪಡಿಸಿಕೊಂಡು ಹೋಗಿ ಕೃತ್ಯ ಎಸಗಿದ್ದಾಳೆ. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಮೃತರ ಮನೆ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಶಬಾನಾ ಭಾನು ಸಂಚಾರ ಮಾಹಿತಿ ಸಿಕ್ಕಿದೆ. ಈ ಸುಳಿವು ಆಧರಿಸಿ ಪೊಲೀಸರು, ಶಂಕೆ ಮೇರೆ ಆಕೆಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ