ಬೆಂಗಳೂರು: ರೈಲಲ್ಲಿ ಸಂಬಂಧಿಯ ಚಿನ್ನ ಕದ್ದ ಮಹಿಳೆ ಜೈಲು ಪಾಲು!

Published : Feb 02, 2024, 04:41 AM IST
ಬೆಂಗಳೂರು: ರೈಲಲ್ಲಿ ಸಂಬಂಧಿಯ ಚಿನ್ನ ಕದ್ದ ಮಹಿಳೆ ಜೈಲು ಪಾಲು!

ಸಾರಾಂಶ

ತಮ್ಮ ಸೋದರ ಸಂಬಂಧಿ ಮಹಿಳೆಯ ಚಿನ್ನದ ಸರ ಕಳ‍ವು ಮಾಡಿದ್ದ ಮಹಿಳೆಯೊಬ್ಬಳನ್ನು ದಂಡು ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಠದಹಳ್ಳಿ ನಿವಾಸಿ ಚಂದ್ರಶರ್ಮಾ ಬಂಧಿತಳು.

ಬೆಂಗಳೂರು (ಫೆ.2) : ತಮ್ಮ ಸೋದರ ಸಂಬಂಧಿ ಮಹಿಳೆಯ ಚಿನ್ನದ ಸರ ಕಳ‍ವು ಮಾಡಿದ್ದ ಮಹಿಳೆಯೊಬ್ಬಳನ್ನು ದಂಡು ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಠದಹಳ್ಳಿ ನಿವಾಸಿ ಚಂದ್ರಶರ್ಮಾ ಬಂಧಿತಳಾಗಿದ್ದು, ಆರೋಪಿಯಿಂದ ₹8.51 ಲಕ್ಷ ಮೌಲ್ಯದ ಚಿನ್ನದ ಸರ ಜಪ್ತಿ ಮಾಡಲಾಗಿದೆ. ಕೇರಳದಿಂದ ನಗರಕ್ಕೆ ಬರುವಾಗ ರೈಲಿನಲ್ಲಿ ತಮ್ಮ ಸಂಬಂಧಿ ನಾಗವಾರಪಾಳ್ಯದ ಲಲಿತಾ ಅವರ ಚಿನ್ನಾಭರಣವನ್ನು ಆರೋಪಿ ಕಳವು ಮಾಡಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು: ಐಫೋನ್ ಎಂದು ನಕಲಿ ಫೋನ್ ಕೊಟ್ಟು ₹60,000 ವಂಚನೆ!

ಜ.25 ಕೇರಳ ರಾಜ್ಯದ ಪಾಲ್ಕಾಡ್‌ನಲ್ಲಿ ನಡೆದ ತಮ್ಮ ಸಂಬಂಧಿ ಮನೆಯ ಗೃಹ ಪ್ರವೇಶಕ್ಕೆ ನಾಗವಾರಪಾಳ್ಯದ ಲಲಿತಾ ಹೋಗಿದ್ದರು. ಎರಡು ದಿನಗಳ ಬಳಿಕ ಬಂಧುಗಳ ಜತೆ ಕೊಚ್ಚುವೇಲಿ-ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಲಿತಾ ನಗರಕ್ಕೆ ಮರಳಿದ್ದರು. ಕೆ.ಆರ್‌.ಪುರ ರೈಲ್ವೆ ನಿಲ್ದಾಣದಲ್ಲಿ ಇಳಿದು ಮನೆಗೆ ಮರಳಿದ ಬಳಿಕ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಚಿನ್ನಾಭರಣ ಕಳವಾಗಿರುವುದು ಅವರಿಗೆ ಗೊತ್ತಾಗಿದೆ.

ಸಾಲಗಾರರ ಕಾಟ ತಾಳಲಾರದೆ ಇಡೀ ಕುಟುಂಬ ನಾಪತ್ತೆ; ವಾರ ಕಳೆದರೂ ಪತ್ತೆಯಾಗಿಲ್ಲ!

ಆದರೆ ಲಲಿತಾ ಅವರ ಜತೆ ಕೇರಳದಿಂದ ಪ್ರಯಾಣಿಸಿದ್ದ ಸಂಬಂಧಿ ಚಂದ್ರಶರ್ಮಾ ದಂಡು ರೈಲು ನಿಲ್ದಾಣದಲ್ಲೇ ಇಳಿದು ಹೋಗಿದ್ದಳು. ಈ ಕಳ್ಳತನ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಶಂಕೆ ಮೇರೆಗೆ ಚಂದ್ರಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಬಯಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ