
ಕಾರ್ಕಳ(ಮೇ.30): ಕಳೆದ ವರ್ಷ ಲಾಕ್ಡೌನ್ ಸಂದರ್ಭ ಪತಿ ಮುಂಬೈಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಈ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಪತ್ನಿ ಊರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ನಡೆದಿದೆ.
ರೇಖಾ ಶೆಟ್ಟಿ(35) ಮೃತಪಟ್ಟವರು. ಅವರಿಗೆ 3 ವರ್ಷಗಳ ಹಿಂದೆ ಮುಂಬೈಯಲ್ಲಿ ಹೊಟೇಲ್ ಉದ್ಯಮಿ ರವಿ ಶೆಟ್ಟಿ ಅವರೊಂದಿಗೆ ಮದುವೆಯಾಗಿತ್ತು. ಆದರೆ ಕಳೆದ ಲಾಕ್ಡೌನ್ ಸಂದರ್ಭದಲ್ಲಿ ಹೊಟೇಲ್ ಉದ್ಯಮದಲ್ಲಿ ನಷ್ಟವಾಗಿ ರವಿ ಶೆಟ್ಟಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ರೇಖಾ ಅವರು ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು.
ಗದಗ: ಡೆಡ್ಲಿ ಕೊರೋನಾಗೆ ಹೆದರಿ ಮಹಿಳೆ ಆತ್ಮಹತ್ಯೆ
ಪತಿಯ ಮರಣದಿಂದ ಮಾನಸಿಕವಾಗಿ ನೊಂದಿದ್ದ ರೇಖಾ ಅವರು ಶುಕ್ರವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ