
ಹುಬ್ಬಳ್ಳಿ(ಜ.26): ಎರಡನೇ ಬಾರಿ ಹೆಣ್ಣು ಮಗು ಜನಿಸಿದ್ದಕ್ಕೆ ಇಲ್ಲಿನ ಮದನಿ ಕಾಲನಿಯ ಮಹಿಳೆಯನ್ನು ರೈಲ್ವೆ ಇಲಾಖೆ ನೌಕರನಾಗಿರುವ ಪತಿ ಮನೆಯಿಂದ ಹೊರದಬ್ಬಿರುವ ಘಟನೆ ಕಳೆದ ವರ್ಷ ನ. 8ರಂದು ನಡೆದಿದ್ದು, ತಡವಾಗಿ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಯ್ಯದ್ ಜಮೀರ್ ಖಾದರಸಾಬ್ (33) ಹಾಗೂ ಮನೆಯವರ ಮೇಲೆ ಮಹಿಳೆ ದೂರು ದಾಖಲಿಸಿದ್ದಾರೆ.
ವಿಜಯಪುರ; ಕುಡುಕರ ಅಡ್ಡೆಯಾದ ಐಬಿ, ಗುತ್ತಿಗೆದಾರಂದೆ ಹವಾ!
ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರಿಂದ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ, ಹೆಣ್ಣು ಮಗುವಿನ ಖರ್ಚಿಗೆ ತಂದೆ ಮನೆಯಿಂದ 9 ಲಕ್ಷ ತರಬೇಕು. ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಮಹಿಳಾ ಠಾಣೆ ಪೊಲೀಸರು ಕಾನೂನು ಕ್ರಮ ಜರುಗಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ