ಬೆಂಗಳೂರು: ರೈಲು ನಿಲ್ದಾಣ ಬಳಿ ಡ್ರಮ್‌ನಲ್ಲಿ ಮಹಿಳೆ ಶವ ಪತ್ತೆ, ತನಿಖೆಗೆ 3 ತಂಡ

Published : Mar 15, 2023, 11:38 AM ISTUpdated : Mar 15, 2023, 11:55 AM IST
ಬೆಂಗಳೂರು: ರೈಲು ನಿಲ್ದಾಣ ಬಳಿ ಡ್ರಮ್‌ನಲ್ಲಿ ಮಹಿಳೆ ಶವ ಪತ್ತೆ, ತನಿಖೆಗೆ 3 ತಂಡ

ಸಾರಾಂಶ

ಆಟೋದಲ್ಲಿ ಮೂವರು ವ್ಯಕ್ತಿಗಳು ಡ್ರಮ್‌ ತಂದು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ದ್ವಾರದ ಬಳಿ ಇರಿಸಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವರದಿ ಶೀಘ್ರದಲ್ಲೇ ಕೈಸೇರಲಿದೆ. ಕೊಲೆಯಾದ ಮಹಿಳೆ ಚಹರೆ ಪತ್ತೆಯಾಗಿಲ್ಲ. 

ಬೆಂಗಳೂರು(ಮಾ.15):  ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ ಪ್ರಕರಣ ಬೇಧಿಸಲು ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆಟೋದಲ್ಲಿ ಮೂವರು ವ್ಯಕ್ತಿಗಳು ಡ್ರಮ್‌ ತಂದು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ದ್ವಾರದ ಬಳಿ ಇರಿಸಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವರದಿ ಶೀಘ್ರದಲ್ಲೇ ಕೈಸೇರಲಿದೆ. ಕೊಲೆಯಾದ ಮಹಿಳೆ ಚಹರೆ ಪತ್ತೆಯಾಗಿಲ್ಲ. ಮಹಿಳೆಗೆ 30 ರಿಂದ 35 ವರ್ಷ ವಯಸ್ಸಾಗಿರಬಹುದು. ದುಷ್ಕರ್ಮಿಗಳ ಪತ್ತೆಗೆ ಪೊಲೀಸರ ಮೂರು ವಿಶೇಷ ತಂಡ ರಚಿಸಿದ್ದು, ಈಗಾಗಲೇ ತಂಡಗಳು ಪತ್ತೆ ಕಾರ್ಯದಲ್ಲಿ ಸಕ್ರಿಯವಾಗಿವೆ ಎಂದು ರೈಲ್ವೆ ವಿಭಾಗದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಗಗನಸಖಿ ಸಾವು ಆತ್ಮಹತ್ಯೆಯಲ್ಲ, ಅಪಾರ್ಟ್‌ಮೆಂಟ್‌ನಿಂದ ನೂಕಿ ಕೊಂದ ಪ್ರಿಯಕರ

ಜ.4ರಂದು ಯಶವಂತಪುರ ರೈಲು ನಿಲ್ದಾಣದಲ್ಲಿ ಸಹ ಡ್ರಮ್‌ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿತ್ತು. ಆದರೆ, ಈವರೆಗೂ ಕೊಲೆಯಾದ ಮಹಿಳೆ ಹಾಗೂ ದುಷ್ಕರ್ಮಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದೀಗ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಈ ಎರಡೂ ಪ್ರಕರಣಗಳಿಗೆ ಯಾವುದೇ ಸಾಮ್ಯತೆ ಇಲ್ಲ. ಬೇರೆ ಬೇರೆ ಗ್ಯಾಂಗ್‌ಗಳು ಹತ್ಯೆ ಮಾಡಿರುವ ಸಾಧ್ಯತೆಯಿದೆ. ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!