
ಹುಬ್ಬಳ್ಳಿ(ಆ.13): ಗಾರ್ಮೆಂಟ್ನಲ್ಲೇ ಅದರ ಮಾಲೀಕರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನವನಗರದಲ್ಲಿ ನಡೆದಿದೆ. ಇದನ್ನು ಪೂರ್ವನಿಯೋಜಿತ ಕೊಲೆ ಎಂದು ಮೃತಳ ತವರು ಮನೆಯವರು ಆರೋಪಿಸಿದ್ದಾರೆ. ಪ್ರಿಯಾ ಬೊಂಗಾಳೆ ಮೃತಪಟ್ಟ ಮಹಿಳೆ.
ಗಾರ್ಮೆಂಟ್ಸ್ ನಡೆಸುತ್ತಿದ್ದ ಇವರ ಶವ ಗಾರ್ಮೆಂಟ್ ಅಂಗಡಿಯಲ್ಲೇ ಪತ್ತೆಯಾಗಿದೆ. ಈಕೆಯ ಸಾವಿನ ಬಗ್ಗೆ ಅನುಮಾನ ಉಂಟಾಗಿದ್ದು, ಈಕೆಯನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ. ಇದು ಆತ್ಮಹತ್ಯೆಯಲ್ಲಾ ಇದು ಪ್ರಿ ಪ್ಲಾನ್ ಮರ್ಡರ್. ಪ್ರಿಯಾ ಗಂಡ ವಿನೋದ್ನಿಂದ ಸಾಕಷ್ಟು ಕಿರುಕುಳಕ್ಕೆ ಒಳಗಾಗಿದ್ದರು. ವಿನೋದ್ ಹಾಗೂ ಪ್ರಿಯಾ ಅವರ ಸಂಬಂಧ ಡೈವೋರ್ಸ್ ಮಟ್ಟಕ್ಕೆ ಹೋಗಿತ್ತು ಎಂದು ಪ್ರಿಯಾಳ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೇಡವೆಂದು ಬೇಡಿಕೊಂಡರೂ ಬಿಡದೇ ಹೆತ್ತ ಮಕ್ಕಳನ್ನೇ ಬಾವಿಗೆ ತಳ್ಳಿದ ತಾಯಿ, ತಾನೂ ಹಾರಿ ಸಾವು
ಪ್ರಕರಣವನ್ನು ದಾಖಲಿಸಿಕೊಂಡಿರುವ ಎಪಿಎಂಸಿ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಕೊಲೆಯೋ ಆತ್ಮಹತ್ಯೆಯೋ ಎಂಬುದು ಗೊತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ