ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು: 4 ತಿಂಗಳ ಹಸುಗೂಸು ಅನಾಥ!

Published : Aug 09, 2024, 09:06 PM IST
ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು: 4 ತಿಂಗಳ ಹಸುಗೂಸು ಅನಾಥ!

ಸಾರಾಂಶ

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಇಂದು ನಡೆದಿದೆ. ರಂಜಿತಾ (22) ಮೃತಪಟ್ಟ ಯುವತಿ.   

ಶಿವಮೊಗ್ಗ (ಆ.09): ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಇಂದು ನಡೆದಿದೆ. ರಂಜಿತಾ (22) ಮೃತಪಟ್ಟ ಯುವತಿ. ಹೌದು! ಮೇವು ತರಲು ಗದ್ದೆಗೆ ತೆರಳಿದ್ದ ವೇಳೆ ರಂಜಿತಾಗೆ ಪೊದೆಯಲ್ಲಿದ್ದ ಹಾವು ಕಚ್ಚಿದ್ದರಿಂದ ಈ ದುರಂತ ಸಂಭವಿಸಿದೆ. ಹಾವು ಕಚ್ಚಿದು ರಂಜಿತಾ ಗಮನಕ್ಕೆ ಬಂದಿಲ್ಲ. 

ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಬಾಣಂತಿ ರಂಜಿತಾ ಮೃತಪಟ್ಟಿದ್ದಾರೆ. ಸದ್ಯ ರಂಜಿತಾಗೆ 4 ತಿಂಗಳ ಹಸುಗೂಸು ಇದ್ದು, 3 ವರ್ಷದ ಹೆಣ್ಣು ಸಹ ಇದೆ. ಇನ್ನು ಆಸ್ಪತ್ರೆಯ ಶವಾಗಾರದ ಬಳಿ ರಂಜಿತಾ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. 

ಮಾನವ ಹಕ್ಕು ಉಲ್ಲಂಘನೆ ಆಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು: ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್

ಸಾರಿಗೆ ವಾಹನ ಡಿಕ್ಕಿಯಾಗಿ ಗರ್ಭಿಣಿ ಮಹಿಳೆ ಸಾವು: ಕಾಮಗೆರೆ ಗ್ರಾಮದ ಹೋಲಿಕ್ರಾಸ್ ಆಸ್ಪತ್ರೆ ಮುಂಭಾಗ ಪಿ.ಜಿ. ಪಾಳ್ಯ ಗ್ರಾಮದ ನಮಿತಾ (22) ಎಂಬಾಕೆ ಸಾರಿಗೆ ಬಸ್‌ಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಪಿಜಿ ಪಾಳ್ಯ ಗ್ರಾಮದ ನಮಿತಾ ಅಜ್ಜಿಪುರದ ಎರಡು ತಿಂಗಳ ಗರ್ಭಿಣಿಯಾಗಿದ್ದು ಕಾಮಗೆರೆ ಖಾಸಗಿ ಹೋಲಿಕ್ರಾಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಬಂದಿದ್ದರು ಎನ್ನಲಾಗಿದೆ. ಆಸ್ಪತ್ರೆ ವೈದ್ಯಕೀಯ ಚಿಕಿತ್ಸೆ ಪಡೆದು ತಮ್ಮ ಗ್ರಾಮಕ್ಕೆ ತೆರಳಲು ಹೋಲಿ ಕ್ರಾಸ್ ಆಸ್ಪತ್ರೆ ಮುಂಭಾಗ ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ವೇಗವಾಗಿ ಬಂದ ಕರ್ನಾಟಕ ರಾಜ್ಯ ಸಾರಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ-ಜೆಡಿಎಸ್‌ನವರಿಂದ ದ್ವೇಷದ ರಾಜಕಾರಣ: ಸಚಿವ ಕೃಷ್ಣ ಬೈರೇಗೌಡ

ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ: ಕರ್ನಾಟಕ ರಾಜ್ಯ ಸಾರಿಗೆ ವಾಹನ ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಕಾಮಗೆರೆ ಗ್ರಾಮದಲ್ಲಿ ಬಸ್ ತಡೆದು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಕರ್ನಾಟಕ ರಾಜ್ಯ ಸಾರಿಗೆ ವ್ಯವಸ್ಥಾಪಕ ಶಂಕರ್ ಆಗಮಿಸಿ ಯುವತಿ ಸಾವಿಗೆ ಪರಿಹಾರದ ಹಣವಾಗಿ 25000 ಅಂತ್ಯ ಸಂಸ್ಕಾರದ ಖರ್ಚು ನೀಡಲಾಗುವುದು. ನಂತರ ಚಾರ್ಜ್ ಶೀಟ್ ಆದ ಬಳಿಕ 25000 ನೀಡಲಾಗುವುದು ಅನಂತರ ಕೋರ್ಟ್ ಮೂಲಕ ಕುಟುಂಬಸ್ಥರಿಗೆ ಪರಿಹಾರದ ಹಣ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಆದರೂ ಘಟನೆಗೆ ಬಗ್ಗೆ ತೀವ್ರವಾಗಿ ಖಂಡಿಸಿ ರಸ್ತೆ ತಡೆ ಮಾಡುತ್ತಿದ್ದ ಗ್ರಾಮಸ್ಥರನ್ನು ಪಟ್ಟಣದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಲ್ಲಿ ಯಶಸ್ವಿಯಾದರು. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!