
ಬಾಗಲಕೋಟೆ(ಜು.23): ತಮಿಳುನಾಡಿನಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣಕ್ಕೆ ಬಂದಿದ್ದ ಸರಕು ತುಂಬಿದ ಲಾರಿಯಲ್ಲಿ ಮಹಿಳೆಯ ರುಂಡ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ರುಂಡ ಕಂಡ ಲಾರಿ ಚಾಲಕ ಇಳಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ.
ತಮಿಳುನಾಡಿನ ಮಧುರೈನಿಂದ ಇಳಕಲ್ಲ ಪಟ್ಟಣಕ್ಕೆ ಟಿಎನ್-52 ಆರ್-7952 ಸಂಖ್ಯೆಯ ಲಾರಿ ಗ್ರಾನೈಟ್ ತುಂಬಿಕೊಂಡು ಬಂದಿದೆ. ಗ್ರಾನೈಟ್ ಇಳಿಸುವ ಸಂದರ್ಭದಲ್ಲಿ ಮಹಿಳೆಯ ರುಂಡ ಇರುವ ಚೀಲ ಪತ್ತೆಯಾಗಿದೆ.
ಜೀನ್ಸ್ ಪ್ಯಾಂಟ್ ಧರಿಸಿದ ಕಾರಣಕ್ಕೆ ಯುವತಿ ಮೇಲೆ ಕುಟುಂಬಸ್ಥರ ಹಲ್ಲೆ; ಸೇತುವೆ ಬಳಿ ಶವ ಪತ್ತೆ!
ಅಂದಾಜು 65 ರಿಂದ 70 ವರ್ಷದ ಅಪರಿಚಿತ ಮಹಿಳೆಯ ರುಂಡ ಇದಾಗಿದ್ದು, ತಲೆ ಕತ್ತರಿಸಿ ಚೀಲದಲ್ಲಿ ತುಂಬಿ ಯಾರೋ ಲಾರಿಯಲ್ಲಿ ದುಷ್ಕರ್ಮಿಗಳು ಎಸೆದಿರಬಹುದು. ಇಲ್ಲವೇ ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಹಿನ್ನೆಲೆಯಲ್ಲಿ ಲಾರಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಲಾರಿ ಚಾಲಕ ರಾಜಾ ಕಲ್ಯಾಣ ಸುಂದರ ನೀಡಿರುವ ದೂರಿನನ್ವಯ ಇಳಕಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ