
ಬೆಂಗಳೂರು (ಮೇ.26) ಹಣಕ್ಕಾಗಿ ಮಹಿಳಾ ಕೆಎಎಸ್ ಅಧಿಕಾರಿಗೆ ತಮ್ಮನಿಂದಲೇ ಬಾನಮತಿ ಮಾಡಿಸುವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಕೆಎಎಸ್ ಅಧಿಕಾರಿಯಾಗಿರುವ ಡಾ.ಮೈತ್ರಿ. ಹಣಕ್ಕಾಗಿ ಸಹೋದರ ಸಂಜಯ ಮಾಟ ಮಂತ್ರ ಮಾಡಿಸುವುದಾಗಿ ಬೆದರಿಕೆ ಹಾಕಿರುವ ಆರೋಪ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿರುವ ಕೆಎಎಸ್ ಅಧಿಕಾರಿ ಡಾ.ಮೈತ್ರಿ.
ಏನಿದು ಘಟನೆ:
ಮಹಿಳಾ ಕೆಎಎಸ್ ಅಧಿಕಾರಿ ಡಾ.ಮೈತ್ರಿಯ ಸಹೋದರನಾಗಿರುವ ಸಂಜಯ. ಇತ್ತೀಚೆಗೆ ಹೊಸ ಬ್ಯುಸಿನೆಸ್ ಶುರು ಮಾಡಲು ಅಕ್ಕ ಮೈತ್ರಿಯ ದುಂಬಾಲು ಬಿದ್ದಿದ್ದಾನೆ. 3 ಕೋಟಿ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದ ತಮ್ಮ ಸಂಜಯ. ಅಷ್ಟು ಹಣ ಕೊಡಲು ನಿರಾಕರಿಸಿದ್ದ ಅಕ್ಕ ಡಾ.ಮೈತ್ರಿ. ಇದರಿಂದಾಗಿ ಜೀವ ಬೆದರಿಕೆ ಒಡ್ಡಿರುವ ತಮ್ಮ. ಮನೆಗೆ ಬಂದು ಹಲ್ಲೆ ನಡೆಸಿರುವ ಸಹೋದರ ಸಂಜಯ.
ತಮ್ಮನಿಂದಲೇ ಜೀವಬೆದರಿಕೆ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧಿಕಾರಿ ಡಾ.ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ