ಪ್ರಿಯಕರನೊಂದಿಗೆ ಕಬ್ಬಿನ ಗದ್ದೆಗೆ ಹೋದ ಮಹಿಳೆ: ಬಳಿಕ ಆಗಿದ್ದು ಘನ ಘೋರ...

Published : May 10, 2020, 05:46 PM IST
ಪ್ರಿಯಕರನೊಂದಿಗೆ ಕಬ್ಬಿನ ಗದ್ದೆಗೆ ಹೋದ ಮಹಿಳೆ: ಬಳಿಕ ಆಗಿದ್ದು ಘನ ಘೋರ...

ಸಾರಾಂಶ

ತನ್ನ ಚಪಲ ತೀರಿಸಿಕೊಳ್ಳಲು ಮಹಿಳೆಯೊಬ್ಬಳ್ಳಲು, ಪ್ರಿಯಕನೊಂದಿಗೆ ಕಬ್ಬಿನ ಗದ್ದೆಗೆ ಹೋಗಿ ಘನಘೋರ ಕೃತ್ಯ ಎಸಗಿದ್ದಾಳೆ.

ಬಾಗಲಕೋಟೆ, (ಮೇ.10): ಅಕ್ರಮ ಸಂಬಂಧ ವಿರೋಧಿಸಿದ್ದಕ್ಕೆ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮುರೋಳ ಗ್ರಾಮದಲ್ಲಿ ನಡೆದಿದೆ.

50 ವರ್ಷದ ಶೇಖಪ್ಪ ಕೊಲೆಯಾದ ವ್ಯಕ್ತಿ. ಏಪ್ರಿಲ್ 24ರಂದು ಕೊಲೆ ಪ್ರಕರಣ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶೇಖಪ್ಪನ 45 ವರ್ಷದ ಪತ್ನಿ ಮತ್ತು ಆಕೆಯ ಪ್ರಿಯಕರ 42 ವರ್ಷದ ಶರಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅನೈತಿಕ ಸಂಬಂಧ, ಮಾರಕಾಸ್ತ್ರದಿಂದ ಕೊಚ್ಚಿ ಪತ್ನಿಯ ಕೊಲೆ: ಪತಿಯೂ ಆತ್ಮಹತ್ಯೆ

ಮುರೋಳ ಗ್ರಾಮದ ಶೇಖಪ್ಪನ ಪತ್ನಿ ಅದೇ ಊರಿನ ಶರಣಪ್ಪನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ತಮ್ಮ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆ ಎಂದು ಏಪ್ರಿಲ್ 24 ರಂದು ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಶೇಖಪ್ಪನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. 

ಬಳಿಕ ದೇಹವನ್ನು ಕತ್ತರಿಸಿ ನಾರಾಯಣಪುರ ಜಲಾಶಯದ ಹಿನ್ನೀರಿನ ಸಮೀಪದ ಹಳ್ಳದಲ್ಲಿ ಹೂತು ಹಾಕಿದ್ದಾರೆ. ನಂತರ ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ ಪತ್ನಿ ಏಪ್ರಿಲ್ 25ರಂದು ಸಂಬಂಧಿಕರೊಂದಿಗೆ ತೆರಳಿ ಪೊಲೀಸರಿಗೆ ಪತಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾಳೆ. 

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡ ಸಂದರ್ಭದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಗೊತ್ತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!