
ಮುಜಾಫರ್ ನಗರ(ಆ. 29) ಪತ್ನಿಗೆ ತ್ರಿವಳಿ ತಲಾಖ್ ಹೆಸರಿನಲ್ಲಿ ವಿಚ್ಛೇದನ ನೀಡಿದ್ದ. ಇಷ್ಟಕ್ಕೆ ಸುಮ್ಮನಿರದ ಪಾಪಿ ಪತ್ನಿಯ ಖಾಸಗಿ ವಿಡಿಯೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ತಾನೇ ಹರಿಬಿಟ್ಟಿದ್ದ. ನೊಂದ ಮಹಿಳೆ ಆತ್ಮಹತ್ಯಗೆ ಶರಣಾಗಿದ್ದಾಳೆ .
ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿಶನ್ಪುರ್ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿ ದೀಪಕ್ ಚತುರ್ವೇದಿಯ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ 18 ತಿಂಗಳ ಮಗನಿದ್ದಾನೆ.
ಮೂರು ತಿಂಗಳ ಹಿಂದೆ ಆರೋಪಿಯು ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದ. ಇದಾದ ಮೇಲೆ ಮಹಿಳೆ ತನ್ನ ಹೆತ್ತವರೊಂದಿಗೆ ವಾಸವಿದ್ದಳು. ಮಗು ಸಹ ಆಕೆಯೊಂದಿಗೆ ಕಿಶನ್ಪುರ್ ಗ್ರಾಮದಲ್ಲಿತ್ತು.
ತ್ರಿವಳಿ ತಲಾಖ್ ಹೊಸ ಕಾನೂನು ಏನು ಹೇಳುತ್ತದೆ?
ತನಗೆ ಕಾನೂನು ಬಾಹಿರವಾಗಿ ತಲಾಖ್ ನೀಡಿದ್ದು ಅಲ್ಲದೇ ಮಗನನ್ನು ಬೇರೆ ಮಾಡಲು ನೋಡುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ.
ಆದರೆ ದೂರು ನೀಡಿದ ನಂತರ ಪಾಪಿ ಮತ್ತೊಂದು ಕೆಲಸ ಮಾಡಿದ್ದಾನೆ. ಅಶ್ಲೀಲ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದು ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಪಾಪಿ ಗಂಡನಿಗಾಗಿ ಹುಡುಕಾಟ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ