ಭಟ್ಕಳದಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ: ಕಾರಣ..?

Kannadaprabha News   | Asianet News
Published : Jan 25, 2021, 10:00 AM IST
ಭಟ್ಕಳದಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ: ಕಾರಣ..?

ಸಾರಾಂಶ

ಮಹಿಳೆಯ ತಲೆಗೆ ಹೊಡೆದು ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಕೊಲೆ| ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದ ಘಟನೆ| ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|  

ಭಟ್ಕಳ(ಜ.25):  ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ಶನಿವಾರ ರಾತ್ರಿ ನಡೆದಿದೆ.

ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂಬುವರೇ ಕೊಲೆಯಾದ ಮಹಿಳೆಯಾಗಿದ್ದಾರೆ. ಶನಿವಾರ ರಾತ್ರಿ ಅವರು ಮನೆಯಲ್ಲಿ ಒಬ್ಬಳೇ ಇರುವಾಗ ಕೊಲೆ ನಡೆದಿದೆ. ಮಹಿಳೆಯ ಕೈಗೆ ಸುಟ್ಟಗಾಯವಾಗಿದ್ದು, ತಲೆಯ ಹಿಂಭಾಗಕ್ಕೆ ಮಾರಕಾಯುಧದಿಂದ ಬಲವಾಗಿ ಹೊಡೆದಿರುವುದು ಮತ್ತು ಕುತ್ತಿಗೆಗೆ ಬಿಗಿದಿರುವುದು ಕಂಡುಬಂದಿದೆ. ಇವರಿಗೂ ಮತ್ತು ಕೆಲವರಿಗೆ ಇತ್ತೀಚೆಗೆ ದಾರಿಯಲ್ಲಿ ಮರದ ಕೊಂಬೆ ಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆಗಿದೆ ಎನ್ನಲಾಗಿದ್ದು, ಕೊಲೆಗೆ ಈ ಘಟನೆ ಕಾರಣವೇ ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ. 

ಬೆಳಗಾವಿ: ಆಸ್ತಿ ವಿವಾದಕ್ಕೆ ಏನೂ ಅರಿಯದ ನಾಲ್ಕು ವರ್ಷದ ಬಾಲಕ ಬಲಿ

ಕೊಲೆಗೀಡಾದ ಮಹಿಳೆಯ ಪುತ್ರ ಗಣಪತಿ ನಾಯ್ಕ ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಸಿಪಿಐ ದಿವಾಕರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮುರ್ಡೇಶ್ವರ ಠಾಣೆಯ ಪಿಎಸ್‌ಐ ರವೀಂದ್ರ ಬಿರಾದಾರ ತನಿಖೆ ನಡೆಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು