ಹೊಸಪೇಟೆಯಲ್ಲಿ ವಿವಾಹಿತ ಮಹಿಳೆ ಕೊಲೆ, ಕಾರಣ..?

Kannadaprabha News   | Asianet News
Published : Sep 20, 2020, 03:20 PM IST
ಹೊಸಪೇಟೆಯಲ್ಲಿ ವಿವಾಹಿತ ಮಹಿಳೆ ಕೊಲೆ, ಕಾರಣ..?

ಸಾರಾಂಶ

ಮಹಿಳೆಯ ಕೊಲೆ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ನಡೆದ ಘಟನೆ| ಈ ಸಂಬಂಧ  ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹೊಸಪೇಟೆ(ಸೆ.20): ನಗರದ ವಿಜಯನಗರ ಕಾಲೇಜು ಬಳಿಯ ಬಿಎಸ್‌ಎನ್‌ಎಲ್‌ ಟಾವ​ರ್‌ ಪ್ರದೇಶದಲ್ಲಿ ಮಹಿಳೆಯ ಕೊಲೆ ಮಾಡಲಾಗಿದೆ ಎಂದು ನಗರದ ಚಿತ್ತವಾಡ್ಗಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಮುಬೀನಾ ಬಾನು (32) ಮೃತ ಮಹಿಳೆ. 2016ರಲ್ಲಿ ನಗರದ ಆಸೀಫ್‌ ಎಂಬುವರೊಂದಿಗೆ ಮುಬೀನಾ ಬಾನು ಮದುವೆಯಾಗಿತ್ತು. ನಾಲ್ಕು ವರ್ಷದ ಹೆಣ್ಣು ಮಗುವಿದೆ. 

ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ

ಕಳೆದೆರಡು ದಿನಗಳ ಹಿಂದೆ ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಮಹಿಳೆ ಸಾವು ಸಹಜ ಅಲ್ಲ, ಕೊಲೆ ಎಂದು ಆರೋಪಿಸಿ ಮುಬಿನಾ ತಾಯಿ ಸಾಜೀದಾ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!