ಸಾಕ್ಷ್ಯ ಹೇಳಲು ಬಂದ ಮಹಿಳೆ ಮೇಲೆ ಕೋರ್ಟ್‌ನಲ್ಲೇ ಗುಂಡಿನ ದಾಳಿ

Published : Apr 21, 2023, 12:20 PM ISTUpdated : Apr 21, 2023, 12:33 PM IST
ಸಾಕ್ಷ್ಯ ಹೇಳಲು ಬಂದ ಮಹಿಳೆ ಮೇಲೆ ಕೋರ್ಟ್‌ನಲ್ಲೇ  ಗುಂಡಿನ ದಾಳಿ

ಸಾರಾಂಶ

ಸಾಕ್ಷ್ಯ ಹೇಳಲು ಕೋರ್ಟ್‌ಗೆ ಬಂದ ಮಹಿಳೆ ಮೇಲೆ ಕೋರ್ಟ್ ಆವರಣದಲ್ಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ನಡೆದಿದೆ.

ದೆಹಲಿ: ಸಾಕ್ಷ್ಯ ಹೇಳಲು ಕೋರ್ಟ್‌ಗೆ ಬಂದ ಮಹಿಳೆ ಮೇಲೆ ಕೋರ್ಟ್ ಆವರಣದಲ್ಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ನಡೆದಿದೆ.  ಮಹಿಳೆಯ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದ್ದು, ಮಹಿಳೆ ನೋವಿನಿಂದ ಚೀರಾಡುತ್ತಿರುವ ವೀಡಿಯೋ ಈಗ ವೈರಲ್ ಆಗಿದೆ. ಕೂಡಲೇ ಪೊಲೀಸರು ಮಹಿಳೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ ವಕೀಲನ ವೇಷದಲ್ಲಿದ್ದ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.  ಗುಂಡಿನ ದಾಳಿ ನಡೆಸಿದಾತ ಮಹಿಳೆಯ ಪತಿಯೇ ಎಂದು ಪೊಲೀಸ್ ಮೂಲಗಳು ಹೇಳಿವೆ. 

ಯುಪಿಯಲ್ಲಿ ಗುಂಡಿನ ದಾಳಿಗೆ ಯುವತಿ ಬಲಿ: ಅತೀಕ್‌ ಹತ್ಯೆಯಂತೆ ಈ ಸಾವನ್ನೂ ಸಂಭ್ರಮಿಸುತ್ತೀರಾ ಎಂದು ಟೀಕೆ


ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ  ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇದೇ ರೀತಿ ಗುಂಡಿನ ದಾಳಿ ನಡೆದಿತ್ತು.  ಆ ಪ್ರಕರಣದಲ್ಲೂ ವಕೀಲನ ವೇಷದಲ್ಲಿದ್ದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಕೂಡಲೇ ಪ್ರತಿದಾಳಿ ನಡೆಸಿದ ಪೊಲೀಸರು ಆತನ ಹತ್ಯೆ ಮಾಡಿದ್ದರು.  ರಾಹುಲ್ ತ್ಯಾಗಿ (Rahul Tyagi) ಹಾಗೂ ಜಗದೀಪ್ ಜಗ್ಗ (Jagdeep Jagga) ಎಂಬ ಇಬ್ಬರು ದಾಳಿಕೋರರು  ವಕೀಲರಂತೆ ವೇಷ ಧರಿಸಿ  ಕೋರ್ಟ್‌ ರೂಮ್ ಪ್ರವೇಶಿಸಿದ್ದರು, ನಂತರ ಗ್ಯಾಂಗ್‌ಸ್ಟಾರ್ ಜಿತೇಂದರ್ ಮಾನ್ ಅಲಿಯಾಸ್ ಗೋಗಿ (Jitender Maan alias Gogi) ಮೇಲೆ ಹಲವು ಸುತ್ತುಗಳ ಗುಂಡಿನ ದಾಳಿ ನಡೆಸಿದ್ದರು.  ಈ ವೇಳೆ ಪ್ರತಿದಾಳಿ ನಡೆಸಿದ ಪೊಲೀಸರು ಈ ಇಬ್ಬರನ್ನು ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಕಳೆದ ವರ್ಷ ಏಪ್ರಿಲ್‌ನಲ್ಲಿ  ವಕೀಲರೊಳಗಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ ರೋಹಿಣಿ ಆವರಣದಲ್ಲಿ ಗುಂಡಿನ ದಾಳಿ ನಡೆದಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ