
ಜೇವರ್ಗಿ(ಆ.27): ಕುಡಿದ ನಶೆಯಲ್ಲಿ ಹೆತ್ತವಳನ್ನೇ ಮಗ ಕೊಲೆ ಮಾಡಿ ಜೈಲು ಸೇರಿದ ಘಟನೆ ತಾಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಯಾತನೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಯಲ್ಲವ್ವ ಸಿದ್ದಪ್ಪ ದೊಡ್ಡಮನಿ (70) ಕೊಲೆಗೀಡಾಗಿದ್ದು, ಆಕೆಯ ಹೆತ್ತ ಮಗ ಆರೋಪಿ ಹಣಮಂತ ಸಿದ್ದಪ್ಪ ದೊಡ್ಡಮನಿ ಕೊಲೆ ಮಾಡಿದ್ದಾನೆ. ಆರೋಪಿ ಹಣಮಂತ ತನ್ನ ಕುಡಿತದ ಚಟಕ್ಕೆ ನಿತ್ಯ ತಾಯಿ ಯಲ್ಲವ್ವನ ಜೊತೆ ಹಣಕ್ಕಾಗಿ ಪೀಡಿಸುತ್ತಿದ್ದ.
ಬೇರೆ ಮಹಿಳೆ ಜೊತೆ ಗಂಡನ ಲವ್ವಿ-ಡವ್ವಿ : ಕೊಚ್ಚಿ ಕೊಂದು ಜೊತೆಗೆ ಮಲಗಿದ್ಲು ಹೆಂಡ್ತಿ!
ಹಣ ಕೊಡಲಿಲ್ಲವೆಂದು ಕಳೆದ ಮಂಗಳವಾರ ರಾತ್ರಿ ಕಂಠಪೂರ್ತಿ ಕುಡಿದು ಬಂದು ತಾಯಿ ಯಲ್ಲವ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಘಟನೆ ಸುದ್ಧಿ ತಿಳಿದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಸೀಮಿ ಮರೀಯಮ್ ಜಾಜ್ರ್, ಡಿವೈಎಸ್ಪಿ ತಾಯಪ್ಪ ದೊಡ್ಡಮನಿ, ಸಿಪಿಐ ರಮೇಶ ರೊಟ್ಟಿ, ಪಿಎಸ್ಐ ಮಲ್ಲಣ್ಣ ಯಲಗೋಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ