ಕಲಬುರಗಿ: ಹೆಂಡತಿ ಎದುರೇ ಅಳಿಯನಿಂದ ಅತ್ತೆ ಕೊಲೆ..!

Kannadaprabha News   | Asianet News
Published : Nov 06, 2020, 03:32 PM IST
ಕಲಬುರಗಿ: ಹೆಂಡತಿ ಎದುರೇ ಅಳಿಯನಿಂದ ಅತ್ತೆ ಕೊಲೆ..!

ಸಾರಾಂಶ

ಅತ್ತೆಯನ್ನ ಕೊಂದ ಅಳಿಯ| ಕಲಬುರಗಿ ತಾಲೂಕಿನ ಭೀಮನಾಳ ಕಮಲಾಪುರದ ಬಳಿ ನಡೆದ ಘಟನೆ| ಮದುವೆಯಾದಾಗಿನಿಂದ ಹೆಂಡತಿಗೆ ಕಿರುಕುಳ ಕೊಡುತ್ತಿದ್ದ ಆರೋಪಿ| ಅಳಿಯನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕಣ ದಾಖಲಿಸಲು ಬರುತ್ತಿದ್ದವ ವೇಳೆ ನಡೆದ ಹತ್ಯೆ| 

ಕಲಬುರಗಿ(ನ.06): ಅಳಿಯನೇ ಅತ್ತೆಯ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಗೈದಿರುವ ಘಟನೆ ಕಮಲಾಪುರ ತಾಲೂಕಿನ ಭೀಮನಾಳ ಕಮಲಾಪುರ ಮಧ್ಯದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚಿಂದಿ ಬಸವಣ್ಣ ದೇವಾಲಯದ ಬಳಿ ನಡೆದಿದೆ. 

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ವಾಗಲಗಾಂವ ಗ್ರಾಮದ ಲುಗಜಾಬಾಯಿ ಗೋವಿಂದ ಬಿರಾದಾರ (40) ಮೃತ ಮಹಿಳೆಯಾಗಿದ್ದು, ಇವರ ಅಳಿಯ ಭೀಮನಾಳ ಗ್ರಾಮದ ರಾಮ ಪ್ರಭು ಹುಡಗೆ ಕೊಲೆ ಮಾಡಿದ ಆರೋಪಿ. ಲುಗಜಾಬಾಯಿ ಮಗಳು ರೇಣುಕಾಳನ್ನು ಭೀಮನಾಳ ಗ್ರಾಮದ ರಾಮ ಪ್ರಭು ಹುಡಗೆ ಎಂಬಾತನಿಗೆ 3 ವರ್ಷದ ಹಿಂದೆ ಮದುವೆ ಮಾಡಿಕೊಟ್ಟಿದ್ದರು. 

ಶಿವಮೊಗ್ಗ;  ಅಪ್ಪನೊಂದಿಗೆ ಕಾಮದಾಟದಲ್ಲಿದ್ದ ಪತ್ನಿ, ಹೆಂಡತಿ ಹತ್ಯೆ ಮಾಡಿದ ಗಂಡ!

ಮದುವೆಯಾದಾಗಿನಿಂದ ಮಗಳಿಗೆ ರಾಮ ಕಿರುಕುಳ ಕೊಡುತ್ತಿದ್ದ. ಹೀಗಾಗಿ ಕೆಲ ದಿನಗಳ ಹಿಂದೆ ರೇಣುಕಾಳನ್ನು ತವರಿಗೆ ಕರೆದ್ಯೊಯ್ದಿದ್ದರು. ಸ್ಥಳೀಯರ ರಾಜಿ ಸಂಧಾನದ ಮೇರೆಗೆ ಮತ್ತೆ ಗಂಡನ ಮನೆಗೆ ತಂದು ಬಿಟ್ಟಿದ್ದರು. ಜೊತೆಗೆ ತಾಯಿ ಲುಗಜಾಬಾಯಿ ಸಹ ಉಳಿದುಕೊಂಡಿದ್ದರು. ಅಳಿಯ ರಾಮ ಮತ್ತೆ ಜಗಳ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಹೀಗಾಗಿ ಲುಗಜಾಬಾಯಿ ಮಗಳು ರೇಣುಕಾ ಸೇರಿ ದೂರು ದಾಖಲಿಸಲು ಕಮಲಾಪುರ ಪೊಲೀಸ್‌ ಠಾಣೆಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ತಡೆದು ತಲೆಗೆ ಕಲ್ಲಿನಿಂದ ಹೊಡೆದಿದ್ದಾನೆ. ಕೆಳಗೆ ಬಿದ್ದ ತಕ್ಷಣ ಮತ್ತೆ ಕಲ್ಲು ಎತ್ತಿ ತಲೆಯ ಮೇಲೆ ಹಾಕಿದ್ದಾನೆ. ರೇಣುಕಾಗೆ ಈಗಾಗಲೇ 2 ವರ್ಷದ ಮಗುವಿದ್ದು, 5 ತಿಂಗಳ ಗರ್ಭಿಣಿ ಇದ್ದಾಳೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ