ಚಿನ್ನ ಖರೀದಿಸುವ ನೆಪದಲ್ಲಿ ಮಾಂಗಲ್ಯ ಸರ ಎಗರಿಸಿದ ಖತರ್ನಾಕ್ ಮಹಿಳೆಯರು! 

Published : Dec 05, 2023, 11:58 PM IST
ಚಿನ್ನ ಖರೀದಿಸುವ ನೆಪದಲ್ಲಿ ಮಾಂಗಲ್ಯ ಸರ ಎಗರಿಸಿದ ಖತರ್ನಾಕ್ ಮಹಿಳೆಯರು! 

ಸಾರಾಂಶ

: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಶಾಪ್ ಗೆ ಬಂದ ತಾಯಿ-ಮಗಳು  32 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾದ ಘಟನೆ ತುಮಕೂರು‌ ನಗರದ ಗುಂಚಿ ಸರ್ಕಲ್ ಬಳಿಯಿರುವ  ಎಸ್‌ಎನ್‌ಡಿ ಜ್ಯುವೆಲ್ಲರಿ ಶಾಪ್ ನಲ್ಲಿ ನಡೆದಿದೆ. 

ತುಮಕೂರು(ಡಿ.5) : ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಶಾಪ್ ಗೆ ಬಂದ ತಾಯಿ-ಮಗಳು  32 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾದ ಘಟನೆ ತುಮಕೂರು‌ ನಗರದ ಗುಂಚಿ ಸರ್ಕಲ್ ಬಳಿಯಿರುವ  ಎಸ್‌ಎನ್‌ಡಿ ಜ್ಯುವೆಲ್ಲರಿ ಶಾಪ್ ನಲ್ಲಿ ನಡೆದಿದೆ. 

ಡಿಸೆಂಬರ್ 2 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಯಿ -ಮಗಳ ಸೋಗಿನಲ್ಲಿ ಎಂಟ್ರಿ ಕೊಟ್ಟಿರುವ ಓರ್ವ ಯುವತಿ ಹಾಗೂ ಮಹಿಳೆ ಚಿನ್ನದ ಮಾಂಗಲ್ಯ ಸರ ಖರೀದಿ ಮಾಡುವುದಾಗಿ ಚಿನ್ನದ ಸರಗಳನ್ನು ತೋರಿಸುವಂತೆ ಕೇಳಿದ್ದಾರೆ. ಮಾತಿನ ಮೂಲಕ ಜ್ಯುವೆಲ್ಲರಿ ಶಾಪ್ ಮಾಲೀಕನ ಗಮನ ಬೇರೆಡೆ ಸೆಳೆದ ಓರ್ವ ಯುವತಿ ಹಾಗೂ ಮಹಿಳೆ ವ್ಯವಸ್ಥಿತವಾಗಿ ಮಾಂಗಲ್ಯ ಸರವನ್ನು ಬಚ್ಚಿಟ್ಟುಕೊಂಡಿದ್ದಾರೆ.
ನಂತರ ಎಟಿಎಂ ನಲ್ಲಿ ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಪರಾರಿ ಆಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ‌ಯಾಗಿದ್ದು ಕೆಲ ಗಂಟೆಗಳ ಬಳಿಕ ಚಿನ್ನದ ಸರವನ್ನ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರು ಹಾಗೂ ವಕೀಲರ ನಡುವೆ ಬಹಿರಂಗ ಸಂಘರ್ಷಕ್ಕೆ ವಿರಾಮ ?  ಹೈಕೋರ್ಟ್ ಸೂಚನೆ ಏನು?

ಸರ ಕದ್ದು ಪರಾರಿಯಾದ ಮಹಿಳೆಯರ ವಿರುದ್ಧ ತುಮಕೂರು ನಗರ ಠಾಣೆಗೆ ಜ್ಯುವೆಲ್ಲರಿ ಶಾಪ್ ಮಾಲೀಕ ದೂರು ನೀಡಿದ್ದಾರೆ. ಘಟನೆ ಸಂಬಂಧ ದೂರು ದಾಖಲಿಸಿಕೊಂಡ ತುಮಕೂರು ನಗರ ಠಾಣೆ ಪೊಲೀಸರು. ಆರೋಪಿಗಳ ಪತ್ತೆ ಹಚ್ಚಲು ಜಾಲ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?