
ಯಾದಗಿರಿ (ಸೆ.24) : ಕೋಳಿ ಪಂದ್ಯದ ವೇಳೆ ಎರಡು ಗುಂಪುಗಳು ನಡುವೆ ಗಲಾಟೆಯಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಸಿದ್ದಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿ ಕೋಳಿ ಪಂದ್ಯ ಏರ್ಪಡಿಸಲಾಗಿತ್ತು. ಈ ಪಂದ್ಯದಲ್ಲಿ ಬೆಟ್ಟಿಂಗ್ ಆಡಲೆಂದೇ ನೂರಾರು ಜನರು ಸೇರಿದ್ದರು. ಎರಡು ಗುಂಪುಗಳ ನಡುವೆ ನಡೆದಿದ್ದ ಬೆಟ್ಟಿಂಗ್. ಆದರೆ ಗೆದ್ದ ತಂಡದವರಿಗೆ ಬೆಟ್ಟಿಂಗ್ ಹಣ ಹಾಗೂ ಮೃತ ಕೋಳಿ ನೀಡದ್ದಕ್ಕೆ ಶುರುವಾದ ಜಗಳ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಕೋಳಿ ಪಂದ್ಯವನ್ನು ನಿಷೇಧಿಸಲಾಗಿದ್ದರೂ ಸಹ ಯಾದಗಿರಿ ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ಇದೆಲ್ಲ ಪೊಲೀಸ್ ಇಲಾಖೆಗೆ ಗೊತ್ತಿದ್ದರೂ ಕಣ್ಮುಚ್ಚಿಕೊಂಡು ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಕೊಪ್ಪಳ: ನಿಷೇಧದ ಮಧ್ಯೆಯೂ ನಡೆದ ಕೋಳಿ ಜೂಜಾಟ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ