ಯಾದಗಿರಿ: ಬೆಳಗಿನ ಜಾವ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿ ಹುಂಡಿ ಹಣ ಕದ್ದು ಖದೀಮರು ಪರಾರಿ!

Published : Oct 31, 2023, 10:36 AM ISTUpdated : Oct 31, 2023, 10:37 AM IST
ಯಾದಗಿರಿ: ಬೆಳಗಿನ ಜಾವ ಯಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿ ಹುಂಡಿ ಹಣ ಕದ್ದು ಖದೀಮರು ಪರಾರಿ!

ಸಾರಾಂಶ

ಯಲ್ಲಮ್ಮ ದೇವಸ್ಥಾನದ ಹುಂಡಿ ಒಡೆದು ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ನಡೆದಿದೆ. ಇಂದು ನಸುಕಿನ ಜಾವ ದೇವಸ್ಥಾನದೊಳಗೆ ನುಗ್ಗಿರುವ ಕಳ್ಳರು.

ಯಾದಗಿರಿ (ಅ.31): ಯಲ್ಲಮ್ಮ ದೇವಸ್ಥಾನದ ಹುಂಡಿ ಒಡೆದು ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ನಡೆದಿದೆ.

ಇಂದು ನಸುಕಿನ ಜಾವ ದೇವಸ್ಥಾನದೊಳಗೆ ನುಗ್ಗಿರುವ ಕಳ್ಳರು. ಯಲ್ಲಮ್ಮ ದೇವಸ್ಥಾನದ ಗರ್ಭಗುಡಿಯಲ್ಲಿರುವ ಹುಂಡಿ. ಕಳೆದ ತಿಂಗಳಿಂದ ಸಾಲು ಸಾಲು ಹಬ್ಬಗಳು. ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಂದ ಹುಂಡಿಗೆ ಹಣ. ಹುಂಡಿ ಹಣ ತೆಗೆದಿರಲಿಲ್ಲ. ಹೀಗಾಗಿ ಖದೀಮರು ಹುಂಡಿ ಹಣ ದೋಚಲು ಪ್ಲಾನ್ ಮಾಡಿ ಇಂದು ಬೆಳಗಿನ ಜಾವ ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡಿರುವ ಖದೀಮರು.

5-6 ಜನ ಕಳ್ಳರು ಸೇರಿಕೊಂಡು ಹುಂಡಿ ಬೀಗ ಮುರಿದು ಹಣ ದೋಚಿರುವ ಶಂಕೆ. ಹುಂಡಿ ಹಣ ದೋಚಿದ ಬಳಿಕ ಅಲ್ಲಿಂದ ಕಾಲ್ಕಿತ್ತಿರೋ ಕಳ್ಳರು. ಇದೇ ತಿಂಗಳು ಯಾದಗಿರಿ ನಗರದಲ್ಲಿ ಸುಮಾರು 5ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆದಿದ್ದವು. ಇದೀಗ ಯಲ್ಲಮ್ಮ ದೇವಸ್ಥಾನ ಹುಂಡಿಯ ಹಣವೂ ಕಳ್ಳತನವಾಗಿದೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ. 

ಕೊಡೆಕಲ್ ಬಸವೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕದ್ದ ಖದೀಮರು!

ಕಳೆದ ತಿಂಗಳಿಂದ ದೇವಸ್ಥಾನಗಳಲ್ಲೇ ಹೆಚ್ಚು ಕಳುವು ಪ್ರಕರಣಗಳು. ಬಹುತೇಕ ದೇವಸ್ಥಾನಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿಲ್ಲ. ಇದೇ ಬಂಡವಾಳ ಮಾಡಿಕೊಂಡು ಖದೀಮರು ಕಳ್ಳತನ? ಸಿಸಿಟಿವಿ ಅಳವಡಿಸಿದ್ದರಿಂದ ಕಳ್ಳರನ್ನು ಹಿಡಿಯುವುದುಕ್ಕೆ ಪೊಲೀಸರಿಗೆ ಅಡ್ಡಿ. ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಸಿದರೆ ಖದೀಮರ ಮುಖ ಚಲನವಲನ ಗಮನಿಸಿ ಪತ್ತೆ ಹಚ್ಚುವುದು ಸುಲಭ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!