ರಾಯಚೂರು: ಫೇಸ್‌ಬುಕ್‌ ಲೈವಲ್ಲಿ ಯುವಕ ಆತ್ಮಹತ್ಯೆ

Kannadaprabha News   | Asianet News
Published : Sep 09, 2021, 07:39 AM IST
ರಾಯಚೂರು: ಫೇಸ್‌ಬುಕ್‌ ಲೈವಲ್ಲಿ ಯುವಕ ಆತ್ಮಹತ್ಯೆ

ಸಾರಾಂಶ

*   ಪ್ರೀತಿಸಿ ಅನ್ಯಕೋವಿನ ಯುವತಿಯನ್ನು ಮದುವೆಯಾಗಿದ್ದ ಮೃತ ಯುವಕ *   ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣು *   ಈ ಸಂಬಂಧ ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲು   

ರಾಯಚೂರು(ಸೆ.09): ಪ್ರೀತಿಸಿ ಮದುವೆಯಾಗಿದ್ದ ಹುಡುಗಿಯಿಂದ ದೂರ ಮಾಡಿದ್ದಕ್ಕೆ ಮನನೊಂದ ಯುವಕ ಪಿಎಸ್‌ಐ ಸೇರಿ ಆರು ಜನರ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟು, ಫೇಸ್‌ಬುಕ್‌ ಲೈವ್‌ನಲ್ಲಿ ತನ್ನ ನೋವನ್ನು ತೋಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ತಾಲೂಕಿನ ಗಾಣಧಾಣ ಗ್ರಾಮದ ನಿವಾಸಿ ಭೀಮೇಶ ನಾಯಕ ಆತ್ಮಹತ್ಯೆಗೆ ಶರಣಾದ ಯುವಕ. ಭೀಮೇಶ 2 ತಿಂಗಳ ಹಿಂದೆ ಓಡಿ ಹೋಗಿ 5 ವರ್ಷಗಳಿಂದ ತಾನು ಪ್ರೀತಿಸುತ್ತಿದ್ದ ಅನ್ಯಕೋವಿನ ಯುವತಿಯನ್ನು ಮದುವೆ ಮಾಡಿಕೊಂಡಿದ್ದ. ಅಂತರ್ಜಾತಿಯ ಮದುವೆ ಹಿನ್ನೆಲೆಯಲ್ಲಿ ಪೋಷಕರು ವಿರೋಧಿಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಅನುಮಾನ ಹೊಕ್ಕರೆ ಅದು ಸಂಸಾರವಲ್ಲ..ನರಕ ವಿಜಯಪುರದ ಸೈಕೋ ಗಂಡ!

ವಿಚಾರಣೆ ಹೆಸರಿನಲ್ಲಿ ನವದಂಪತಿಯನ್ನು ಠಾಣೆಗೆ ಕರೆಸಿದ್ದ ಪೊಲೀಸರು ಇಬ್ಬರನ್ನು ಬೇರ್ಪಡಿಸಿ ಪೋಷಕರ ಜೊತೆಗೆ ಕಳುಹಿಸಿಕೊಟ್ಟಿದ್ದರು. ಇದರಿಂದ ಮನನೊಂದಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ ಬರೆದಿಟ್ಟು, ಫೇಸ್‌ಬುಕ್‌ ಲೈವ್‌ನಲ್ಲಿ ಆಗಿರುವ ಅನ್ಯಾಯವನ್ನು ಹಂಚಿಕೊಂಡು ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!