ಉಡುಪಿ(ಮೇ.22): ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾದ ಘಟನೆ ಇಂದು(ಭಾನುವಾರ) ನಡೆದಿದೆ.
ಮೃತ ವ್ಯಕ್ತಿಗಳನ್ನು ಬೆಂಗಳೂರಿನ ಆರ್.ಟಿ. ನಗರದ ಯಶವಂತ್ ಯಾದವ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ ಭಾನುವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದು ಈ ವೇಳೆ ಕಾರಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.
"
ಪತಿಯ ಕಳ್ಳತನ ಕೃತ್ಯಕ್ಕೆ ಬೆಂಬಲ ಕೊಟ್ಟ ಪತ್ನಿ, ಮೈದುನ ಜೈಲಿಗೆ
ಮೂರು ದಿನಗಳ ಹಿಂದೆ ಯಶವಂತ್ ಯಾದವ್ ಮತ್ತು ಜ್ಯೋತಿ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಾಗಿದ್ದು ಶನಿವಾರ ಮಂಗಳೂರಿಗೆ ಬಂದ ಇವರು ಹುಸೇನ್ ಎಂಬವರಿಂದ ಕಾರನ್ನು ಬಾಡಿಗೆ ಪಡೆದುಕೊಂಡು ಬಂದಿದ್ದು ಬೆಳಗಿನ ಜಾವ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜೋಡಿ ಮೃತರಾದ ಜೋಡಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಒಬ್ಬರಿಗೊಬ್ಬರು ತಬ್ಬಿಕೊಂಡ ರೀತಿಯಲ್ಲಿ ಮೃತದೇಹ ಪತ್ತೆಯಾಗಿವೆ. ಹಿಂಬದಿ ಡೋರ್ನಿಂದ ಮೃತದೇಹಗಳು ಹೊರಗೆ ಬಿದ್ದಿವೆ. ಪೊಲೀಸರ ತನಿಖೆಯಿಂದಷ್ಟೇ ಘಟನೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ