Bengaluru: ಪಾಗಲ್ ಪ್ರೇಮಿ ಕಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ: ಸಹಪಾಠಿ ಅಪಪ್ರಚಾರ ಕಾರಣ?

Published : Feb 03, 2023, 08:25 AM IST
Bengaluru: ಪಾಗಲ್ ಪ್ರೇಮಿ ಕಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ: ಸಹಪಾಠಿ ಅಪಪ್ರಚಾರ ಕಾರಣ?

ಸಾರಾಂಶ

ಪ್ರೀತಿಯ ವಿಚಾರವಾಗಿ ಬೇಸರಗೊಂಡು ಖಾಸಗಿ ಆಸ್ಪತ್ರೆ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು (ಫೆ.03): ಪ್ರೀತಿಯ ವಿಚಾರವಾಗಿ ಬೇಸರಗೊಂಡು ಖಾಸಗಿ ಆಸ್ಪತ್ರೆ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜಯನಗರದ ನಾಗಶೆಟ್ಟಿಹಳ್ಳಿ ನಿವಾಸಿ ಪ್ರಿಯಾಂಶಿ ತ್ರಿಪಾಠಿ (28) ಮೃತ ದುರ್ದೈವಿ. ಇತ್ತೀಚೆಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಿಯಾಂಶಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಮಗಳಿಗೆ ಮದುವೆ ವಿಚಾರವಾಗಿ ನೀಡಿದ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ವೈದ್ಯ ಸುಮೀತ್‌ ವಿರುದ್ಧ ಸಂಜಯನಗರ ಠಾಣೆಗೆ ಮೃತರ ಪೋಷಕರು ದೂರು ನೀಡಿದ್ದರು. 

ಅದರನ್ವಯ ಸುಮೀತ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಪ್ರಿಯಾಂಶಿ ಮೂಲತಃ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯವರಾಗಿದ್ದು, ಎರಡು ವರ್ಷಗಳ ಹಿಂದೆ ಯಶವಂತಪುರ ಮತ್ತಿಕೆರೆಯ ಎಂ.ಎಸ್‌.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಅವರು ವೈದ್ಯಕೀಯ ಶಿಕ್ಷಣ ಮುಗಿಸಿದ್ದರು. ಆನಂತರ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. 

ಕಾಲೇಜಿನ ಓದುವಾಗ ಸಹಪಾಠಿ ಸುಮೀತ್‌ ಪರಿಚಯವಾಗಿ ಇಬ್ಬರ ನಡುವೆ ಪ್ರೇಮವಾಗಿತ್ತು. ಇತ್ತೀಚೆಗೆ ವೈಯಕ್ತಿಕ ವಿಚಾರವಾಗಿ ಈ ಜೋಡಿ ನಡುವೆ ಮನಸ್ತಾಪವಾಗಿತ್ತು ಎಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬೇಸರಗೊಂಡು ಪ್ರಿಯಾಂಶಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಮದುವೆಯಾಗುವಂತೆ ಮಗಳಿಗೆ ಪ್ರಿಯಾಂಶಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ಕೊಡುತ್ತಿದ್ದ. 

ಸಿಬಿಐಗೆ ಸಿಡಿ ಕೇಸ್‌: ಅಮಿತ್‌ ಶಾ ಭೇಟಿಗಾಗಿ ದೆಹಲಿಗೆ ತೆರಳಿದ ರಮೇಶ್‌ ಜಾರಕಿಹೊಳಿ

ಇದಕ್ಕೊಪ್ಪದೆ ಹೋದಾಗ ಮಗಳು ಮದ್ಯ ಮತ್ತು ಸಿಗರೆಟ್‌ ಸೇದುತ್ತಾಳೆ ಎಂದು ಆತ ಅಪಪ್ರಚಾರ ಮಾಡುತ್ತಿದ್ದ. 2022ರ ಮೇನಲ್ಲಿ ಬೆಂಗಳೂರಿಗೆ ಬಂದು ಡಾ.ಸುಮೀತ್‌ಗೆ ಮಗಳ ತಂಟೆಗೆ ಬಾರದಂತೆ ತಾಕೀತು ಮಾಡಿದ್ದೇವು. ಇದಾದ ನಂತರ ಆತ ವರ್ತನೆ ಬದಲಾಯಿಸಿಕೊಳ್ಳಲಿಲ್ಲ. ಈ ಬೆಳವಣಿಗೆಯಿಂದ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ