ಬೆಳಗಾವಿ: ಮನೆಗೆಲಸ ಮಾಡು ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ BE ಪದವೀಧರೆ

Kannadaprabha News   | Asianet News
Published : Jun 24, 2020, 09:23 AM ISTUpdated : Jun 24, 2020, 09:30 AM IST
ಬೆಳಗಾವಿ: ಮನೆಗೆಲಸ ಮಾಡು ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ BE ಪದವೀಧರೆ

ಸಾರಾಂಶ

ಬಿಇ ವ್ಯಾಸಂಗ ಮಾಡಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ| ನಂತರ ಕೆಲಸ ಬಿಟ್ಟು ಬೇರೆ ಕೆಲಸ ಹುಡುಕುತ್ತಾ ಅಲೆದಾಡುತ್ತಿದ್ದ ಮೃತ ಯುವತಿ| ಅಸಮಾಧಾನಗೊಂಡ ಪೋಷಕರು ಮನೆಯಲ್ಲಿ ಕೆಲಸ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆಯಲ್ಲಿನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ|

ಬೆಳಗಾವಿ(ಜೂ.24): ಮನೆಯಲ್ಲಿ ಕೆಲಸ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 

ಗ್ರಾಮದ ನೀಲಗಂಗಾ ಗುರುನಾಥ ನೇಸರಗಿ (23) ನೇಣಿಗೆ ಶರಣಾದ ಯುವತಿ. ಈಕೆ ಬಿಇ ವ್ಯಾಸಂಗ ಮಾಡಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ನಂತರ ಮಾಡುತ್ತಿರುವ ಕೆಲಸವನ್ನು ಬಿಟ್ಟು ಬೇರೆ ಕೆಲಸ ಹುಡುಕುತ್ತಾ ಅಲೆದಾಡುತ್ತಿದ್ದಳು. 

ಪದವಿ ಪರೀಕ್ಷೆ ನಡೆಯದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಇದರಿಂದ ಅಸಮಾಧಾನಗೊಂಡ ಪೋಷಕರು ಮನೆಯಲ್ಲಿ ಕೆಲಸ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆಯಲ್ಲಿನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ತಾಯಿ ಕಲಾವತಿ ನೇಸರಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ