ಹನುಮ ಜಯಂತಿಯಂದೇ ದುರಂತ; ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು!

By Kannadaprabha NewsFirst Published Dec 26, 2023, 1:17 AM IST
Highlights

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ.

ಹಾಸನ (ಡಿ.26): ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ.

ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.

ಹೊಸಕೋಟೆ: ಹನುಮ ಜಯಂತಿ ವೇಳೆ ವಿತರಿಸಿದ ಪ್ರಸಾದ ಸೇವಿಸಿ ಓರ್ವ ಸಾವು; 150ಕ್ಕೂ ಹೆಚ್ಚು ಜನ ಅಸ್ವಸ್ಥ!

click me!