
ಕೋಲಾರ(ಡಿ.27): ಮಹಿಳೆಯೊಂದಿಗೆ ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದಿದೆ.
ಗ್ರಾಮದ ಮಹಿಳೆ ಅನಸೂಯ(35) ಹಾಗೂ ಯುವಕ ವಿಜಯ್ ಕುಮಾರ್(28) ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯ್ ಕುಮಾರ್ ಅನಸೂಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಶರಣಾದ ಈ ಜೋಡಿ ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿತ್ತು.
ಅನಸೂಯ ಮಂಜುನಾಥ್ ಎಂಬುವರೊಂದಿಗೆ ವಿವಾಹವಾಗಿ ಇಬ್ಬರು ಮಕ್ಕಳು ಇದ್ದರು. ವಿಜಯ್ ಕುಮಾರ್ ಅವಿವಾಹಿತನಾಗಿದ್ದನು. ಕಳೆದ ರಾತ್ರಿ ಗ್ರಾಮದ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ