
ವಿಜಯನಗರ(ಅ.11): ಯುವಕ- ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ನದಿ ತೀರದಲ್ಲಿ ಇಂದು(ಶುಕ್ರವಾರ) ನಡೆದಿದೆ.
ನದಿ ತೀರದಲ್ಲಿ ಯುವಕ ಯುವತಿ ಇಬ್ಬರೂ ಒಂದೇ ಹಗ್ಗದಲ್ಲಿ ನೇಣಿಗೆ ಶರಣಾಗಿದ್ದಾರೆ. ಯುವಕ, ಯುವತಿ ಯಾವ ಊರಿನವರು ಎಂಬುದು ತಿಳಿದು ಬಂದಿಲ್ಲ. ನಿನ್ನೆ(ಗುರುವಾರ) ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬೆಂಗಳೂರು: ಕದ್ದ ಚಿನ್ನ ಭಾವನ ಮನೆಯಲ್ಲಿ ಇಟ್ಟಿದ್ದ ಬಾಮೈದ, ಅವಮಾನದಿಂದ ಕತ್ತು ಕೊಯ್ದುಕೊಂಡು ಸಾವು
ಯುವಕನ ಶರ್ಟಿನಲ್ಲಿ ದೇವರ ದರ್ಶನದ ಸಾಮಾನ್ಯ ದರ್ಶನದ ಚೀಟಿ ಸಿಕ್ಕಿದೆ. ಇವರಿಬ್ಬರೂ ನಿನ್ನೆ ಬೆಳಿಗ್ಗೆಯಿಂದ ಸಂಜೆವರೆಗೆ ಗ್ರಾಮದಲ್ಲಿ ಹಾಗೂ ನದಿ ತೀರದಲ್ಲಿ ಓಡಾಡಿದ್ದಾರೆ ಎನ್ನಲಾಗಿದೆ
ಸದ್ಯ ಹುಡುಗನ ಮೊಬೈಲ್ ಪತ್ತೆಯಾಗಿದ್ದು ಸ್ವಿಚ್ ಆಫ್ ಆಗಿದೆ. ರಾತ್ರಿಯೆಲ್ಲ ಮಳೆ ಬಂದಿರೋ ಕಾರಣ ಫೋನ್ ಮಳೆಯಲ್ಲಿ ನೆನೆದಿದೆ ಹಾಗಾಗಿ ಆನ್ ಆಗುತ್ತಿಲ್ಲ. ಸ್ಥಳಕ್ಕೆ ಹೊಳಲು ಉಪ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ