ಬೆಂಗ್ಳೂರಿನ ರಿಸರ್ವ್‌ ಬ್ಯಾಂಕ್‌ ಕಚೇರಿಗೆ ಬಾಂಬ್‌ ಕರೆ: ಯುವಕ ಸೆರೆ

Published : Jun 03, 2023, 01:55 PM IST
ಬೆಂಗ್ಳೂರಿನ ರಿಸರ್ವ್‌ ಬ್ಯಾಂಕ್‌ ಕಚೇರಿಗೆ ಬಾಂಬ್‌ ಕರೆ: ಯುವಕ ಸೆರೆ

ಸಾರಾಂಶ

ಖಾಸಗಿ ಕಾಲೇಜಿನ ಬಿಕಾಂ ಓದುತ್ತಿರುವ ವೈಭವ್‌, ತನ್ನ ಪೋಷಕರ ಜತೆ ನೆಲೆಸಿದ್ದಾನೆ. ಐದು ವರ್ಷಗಳಿಂದ ಮಾನಸಿಕ ಕಾಯಿಲೆಗೆ ಆತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ಗುರುವಾರ ನಸುಕಿನ 2.40ಕ್ಕೆ ಕರೆ ಮಾಡಿದ ಆರೋಪಿ

ಬೆಂಗಳೂರು(ಜೂ.03):  ನಗರದ ಭಾರತೀಯ ರಿಸರ್ವ್‌ ಬ್ಯಾಂಕ್‌ ಕಚೇರಿಯಲ್ಲಿ ಬಾಂಬ್‌ ಇಡಲಾಗಿದೆ ಎಂದು ಪೊಲೀಸ್‌ ನಿಯಂತ್ರಣ ಕೊಠಡಿ (112)ಗೆ ಹುಸಿ ಕರೆ ಮಾಡಿ ಕುಚೋದ್ಯತನ ತೋರಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ ನಿವಾಸಿ ವೈಭವ್‌ ಭಗವಾನ್‌ ಬಂಧಿತನಾಗಿದ್ದು, ಪೊಲೀಸ್‌ ನಿಯಂತ್ರಣ ಕೊಠಡಿಗೆ ತನ್ನ ಮೊಬೈಲ್‌ನಿಂದ ಗುರುವಾರ ನಸುಕಿನಲ್ಲಿ ಆತ ಕರೆ ಮಾಡಿದ್ದ. ಈ ಬಗ್ಗೆ ನಿಯಂತ್ರಣ ಕೊಠಡಿ ಪಿಎಸ್‌ಐ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿದ ವಿಧಾನಸೌಧ ಪೊಲೀಸರು, ಕರೆ ಬಂದಿದ್ದ ಮೊಬೈಲ್‌ ಸಂಖ್ಯೆ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು: ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ..!

ಖಾಸಗಿ ಕಾಲೇಜಿನ ಬಿಕಾಂ ಓದುತ್ತಿರುವ ವೈಭವ್‌, ತನ್ನ ಪೋಷಕರ ಜತೆ ನೆಲೆಸಿದ್ದಾನೆ. ಐದು ವರ್ಷಗಳಿಂದ ಮಾನಸಿಕ ಕಾಯಿಲೆಗೆ ಆತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ನಗರ ಪೊಲೀಸ್‌ ನಿಯಂತ್ರಣ ಕೊಠಡಿಗೆ ಗುರುವಾರ ನಸುಕಿನ 2.40ಕ್ಕೆ ಕರೆ ಮಾಡಿದ ಆರೋಪಿ, ಬೆಂಗಳೂರಿನ ರಿಸರ್ವ್‌ ಬ್ಯಾಂಕ್‌ ಇಂಡಿಯಾದಲ್ಲಿ ಬಾಂಬ್‌ ಬ್ಲಾಸ್ಟ್‌ ಆಗುತ್ತದೆ. ತಕ್ಷಣವೇ ಪರಿಶೀಲಿಸಿ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದ. ಕೂಡಲೇ ಈ ಬಗ್ಗೆ ಕೇಂದ್ರ ವಿಭಾಗದ ಪೊಲೀಸರಿಗೆ ನಿಯಂತ್ರಣ ಕೊಠಡಿ ಸಿಬ್ಬಂದಿ ಮಾಹಿತಿ ನೀಡಿದರು.

ಈ ಮಾಹಿತಿ ಮೇರೆಗೆ ನಗರದ ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಕಚೇರಿಗೆ ತೆರಳಿ ಪೊಲೀಸರು ಪರಿಶೀಲಿಸಿದಾಗ ಇದೊಂದು ಹುಸಿ ಕರೆ ಎಂಬುದು ಗೊತ್ತಾಗಿದೆ. ಬಳಿಕ ನಿಯಂತ್ರಣ ಕೊಠಡಿಯ ಪಿಎಸ್‌ಐ ದೂರು ಆಧರಿಸಿ ತನಿಖೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?