ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು: ಮನನೊಂದ ಯುವಕ ಆತ್ಮಹತ್ಯೆ!

Published : Aug 12, 2023, 05:29 PM IST
ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು: ಮನನೊಂದ ಯುವಕ ಆತ್ಮಹತ್ಯೆ!

ಸಾರಾಂಶ

ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗುತ್ತೆ ಎಂಬ ಹಿರಿಯರ ನಾಣ್ಣುಡಿ ಇದೆ. ಹಾಗೆಯೇ ಋಣಾನು ಬಂಧ ರೂಪೇಣ ಪಶುಪಕ್ಷಿ ಸುತಾಲಯ ಎಂಬುದು ಅಷ್ಟೇ ಜನಜನಿತ.  ಋಣವಿದ್ದ ರಸ್ತೆ ಎಲ್ಲವೂ ಸಾಧ್ಯ ಎಂಬ ತಾತ್ಪರ್ಯ ಈ ಮಾತಿನ ಅರ್ಥ. 

ಶಿವಮೊಗ್ಗ (ಆ.12): ಮದುವೆ ಎಂಬುದು ಸ್ವರ್ಗದಲ್ಲೇ ನಿಶ್ಚಯವಾಗುತ್ತೆ ಎಂಬ ಹಿರಿಯರ ನಾಣ್ಣುಡಿ ಇದೆ. ಹಾಗೆಯೇ ಋಣಾನು ಬಂಧ ರೂಪೇಣ ಪಶುಪಕ್ಷಿ ಸುತಾಲಯ ಎಂಬುದು ಅಷ್ಟೇ ಜನಜನಿತ.  ಋಣವಿದ್ದ ರಸ್ತೆ ಎಲ್ಲವೂ ಸಾಧ್ಯ ಎಂಬ ತಾತ್ಪರ್ಯ ಈ ಮಾತಿನ ಅರ್ಥ. ಆದರೆ ಇನ್ನೊಬ್ಬ ಯುವಕನಿಗೆ ಮದುವೆ ನಿಶ್ಚಯವಾಗಿದ್ದೆ ಕಂಟಕವಾಗಿ ಪರಿಣಮಿಸಿತ್ತು. ಮದುವೆಯೇ ಬೇಡವೆಂದು ಆತ್ಮಹತ್ಯೆಗೆ ಶರಣಾಗಿದ್ದ. ಮದುವೆ ಎಂಬುದು ಬೇಡವಾಗಲು ಈ ಯುವಕನಿಗೆ ಇದ್ದ ಕಾರಣವಾದರೂ ಏನು ಗೊತ್ತಾ? 

ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ. 

ತಲಪಾಡಿ: ಎಸ್‌ಡಿಪಿಐ ಬೆಂಬಲಿಸಿದ ಬಿಜೆಪಿಗನ 'ಆತ್ಮಹತ್ಯೆ' ಮಾತು: ಆಡಿಯೋ ವೈರಲ್!

ಶಿವಮೊಗ್ಗ ತಾಲೂಕು ಆಯನೂರು ಸಮೀಪದ ಕೋಟೆ ಗ್ರಾಮದಲ್ಲಿ ಸ್ವಾಮಿನಾಥ (32) ಎಂಬ ಯುವಕ ಮೃತಪಟ್ಟಿದ್ದಾನೆ. ಸ್ವಾಮಿನಾಥ್‌ಗೆ ಎರಡು ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಹುಡುಗಿ ಈತನಿಗಿಂತ ಮೂರು ವರ್ಷ ದೊಡ್ಡವಳು ಎಂದು ಹೇಳಲಾಗಿದೆ. ಇದೇ ವಿಚಾರವಾಗಿ ಬೇಸರಗೊಂಡಿದ್ದ ಈತ ಮದುವೆ ಬೇಡವೆಂದು ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. 

ಮೈಸೂರು ಅರಸರಿಗೂ ಬೇಬಿಬೆಟ್ಟಕ್ಕೂ ಅವಿನಾಭಾವ ಸಂಬಂಧ: ಯದುವೀರ್‌ ಒಡೆಯರ್‌

ಇದು ಹುಡುಗಿ ಮನೆಯವರಿಗೆ ತಿಳಿದು ಸ್ವಾಮಿನಾಥನ ಮನೆಗೆ ಬಂದು ಗಲಾಟೆ ಮಾಡಿ ಮದುವೆ ಆಗುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದೆ .ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇನ್ನು ಬಾಳಿ ಬದುಕಬೇಕಾಗಿದ್ದ ಯುವಕ ಕೇವಲ ಮದುವೆ ಕಾರಣಕ್ಕಾಗಿ ಆತ್ಮಹತ್ಯೆ ಯಂತಹ ನಿರ್ಧಾರ ತೆಗೆದುಕೊಂಡಿದ್ದು ಸ್ಥಳೀಯರಲ್ಲಿ ಬೇಸರವನ್ನುಂಟು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?