ಕಲಬುರಗಿ: ಪ್ರೇಮ ವಿವಾಹಕ್ಕೆ ಯುವತಿ ಪೋಷಕರ ಅಡ್ಡಿ, ಯುವಕ ಆತ್ಮಹತ್ಯೆ

Published : Sep 05, 2023, 11:00 PM IST
ಕಲಬುರಗಿ: ಪ್ರೇಮ ವಿವಾಹಕ್ಕೆ ಯುವತಿ ಪೋಷಕರ ಅಡ್ಡಿ, ಯುವಕ ಆತ್ಮಹತ್ಯೆ

ಸಾರಾಂಶ

ಅಭಿಷೇಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಕಲಬುರಗಿ(ಸೆ.05):  ಪ್ರೀತಿಸಿದ ಯುವತಿಯ ಕುಟುಂಬದ ಸದಸ್ಯರು ಹಾಕಿದ ಬೆದರಿಕೆಯಿಂದ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಂಬೂ ಬಜಾರದಲ್ಲಿ ನಡೆದಿದೆ.

ಅಭಿಷೇಕ ಮಲ್ಲಿಕಾರ್ಜುನ ಬಿರಾದಾರ (19) ಆತ್ಯಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ ಮತ್ತು ಕಾಳನೂರ ಗ್ರಾಮದ ಯುವತಿಯೊಬ್ಬಳ ನಡುವೆ ಪ್ರೀತಿ ಒಡಮೂಡಿತ್ತು. ಕಳೆದ ಎರಡ್ಮೂರು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗಲೂ ನಿರ್ಧರಿಸಿದ್ದರು. ಇದಕ್ಕೆ ಯುವತಿ ಮನೆಯವರ ವಿರೋಧವಿತ್ತು. ಇದೇ ವಿಷಯಕ್ಕೆ ಯುವತಿಯ ತಂದೆ-ತಾಯಿ, ಗ್ರಾಮದ ಚೇರಮನ್ ಮತ್ತು ಕಮಲನಗರದ ಒಬ್ಬ ವ್ಯಕ್ತಿ ಅಭಿಷೇಕನನ್ನು ಕಮಲನಗರ ಹತ್ತಿರ ಕರೆಯಿಸಿ ಯುವತಿಯನ್ನು ಪ್ರೀತಿಸುವುದಾಗಲಿ, ಆಕೆ ಜೊತೆ ಯಾವುದೇ ರೀತಿಯ ಸಂಬಂಧ ಇಟ್ಟುಕೊಳ್ಳುವುದಾಗಿ ಮಾಡಬೇಡ ಎಂದು ಬೆದರಿಕೆ ಹಾಕಿದ್ದರು.

ಅಶ್ಲೀಲ ವಿಡಿಯೋ ಬೆದರಿಕೆಗೆ ಯುವತಿ ಸೂಸೈಡ್: ಅಪ್ರಾಪ್ತೆ ಬಲಿ ಪಡೆದ ಕಿರಾತಕರು !

ಇದರಿಂದ ಅಭಿಷೇಕ ಮಾನಸಿಕವಾಗಿ ನೊಂದಿದ್ದ. ಇದಾದ ಮೇಲೆ ಒಂದು ದಿನ ಅಭಿಷೇಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಭಿಷೇಕ ಆತ್ಮಹತ್ಯೆಗೆ ಯುವತಿಯ ತಂದೆ-ತಾಯಿ, ಕಾಳನೂರ ಗ್ರಾಮದ ಚೇರ್ಮನ್, ಕಮಲನಗರದ ಒಬ್ಬ ವ್ಯಕ್ತಿಯೇ ಕಾರಣವಾಗಿದ್ದಾರೆ ಎಂದು ಅಭಿಷೇಕ ತಾಯಿ ರತ್ನಮ್ಮ ಮಲ್ಲಿಕಾರ್ಜುನ ಬಿರಾದಾರ ಅವರು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ