ತುಮಕೂರು: ಪ್ರೀತಿಸಿದ ಹುಡುಗಿ ಮನೆ ಮುಂದೆಯೇ ಯುವಕ ಆತ್ಮಹತ್ಯೆ, ಕಾರಣ?

Published : Dec 07, 2024, 10:47 AM IST
ತುಮಕೂರು: ಪ್ರೀತಿಸಿದ ಹುಡುಗಿ ಮನೆ ಮುಂದೆಯೇ ಯುವಕ ಆತ್ಮಹತ್ಯೆ, ಕಾರಣ?

ಸಾರಾಂಶ

ಮೃತ ಮಂಜುನಾಥ್ ಟಿಟಿ ವಾಹನದ ಚಾಲಕನಾಗಿದ್ದನು. ಕೆಲ ತಿಂಗಳಿಂದ ಮಂಜುನಾಥ್ ಮನೆ ಪಕ್ಕದ ಮನೆ ಹುಡುಗಿಯನ್ನ ಪ್ರೀತಿ ಮಾಡುತ್ತಿದ್ದ. ಇಬ್ಬರು ಪರಸ್ಪರ ಮದುವೆಯಾಗಲು ಒಪ್ಪಿದ್ದರು. ಮದುವೆ ಮಾಡಿಕೊಡುವಂತೆ ಯುವತಿ ಮನೆಯವರನ್ನ ಮಂಜುನಾಥ್ ಕೇಳಿದ್ದನಂತೆ. ಮಂಜುನಾಥ್‌ಗೆ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದ್ದರು ಎಂದು ಆರೋಪಿಸಲಾಗಿದೆ. 

ತುಮಕೂರು(ಡಿ.07): ಪ್ರೀತಿಸಿದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಹುಡುಗಿ ಮನೆ ಮುಂದೆಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ಜಯನಗರ ಬಳಿಯ ಚನ್ನಪ್ಪನಪಾಳ್ಯದಲ್ಲಿ ಇಂದು(ಶನಿವಾರ) ನಡೆದಿದೆ. 

ಮಂಜುನಾಥ್(32) ಮೃತ ದುರ್ದೈವಿ. ಮೃತ ಮಂಜುನಾಥ್ ಟಿಟಿ ವಾಹನದ ಚಾಲಕನಾಗಿದ್ದನು. ಕೆಲ ತಿಂಗಳಿಂದ ಮಂಜುನಾಥ್ ಮನೆ ಪಕ್ಕದ ಮನೆ ಹುಡುಗಿಯನ್ನ ಪ್ರೀತಿ ಮಾಡುತ್ತಿದ್ದ. ಇಬ್ಬರು ಪರಸ್ಪರ ಮದುವೆಯಾಗಲು ಒಪ್ಪಿದ್ದರು. 
ಮದುವೆ ಮಾಡಿಕೊಡುವಂತೆ ಯುವತಿ ಮನೆಯವರನ್ನ ಮಂಜುನಾಥ್ ಕೇಳಿದ್ದನಂತೆ. ಮಂಜುನಾಥ್‌ಗೆ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದ್ದರು ಎಂದು ಆರೋಪಿಸಲಾಗಿದೆ. 

ಯುವತಿ ಇನ್ನೂ ಅಪ್ರಾಪ್ತೆ ಇರುವ ಹಿನ್ನೆಲೆಯಲ್ಲಿ ಮದುವೆ ಮಾಡಿಕೊಡಲು ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ ತಡರಾತ್ರಿ ಯುವತಿ ಮನೆ ಮುಂದೆಯೇ ಮಂಜುನಾಥ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹುಟ್ಟಿಸಿದ ಮಕ್ಕಳಿಂದಲೇ ನೆಮ್ಮದಿ ಹಾಳು, ತಂದೆ ಆತ್ಮಹತ್ಯೆ; ಮೃತದೇಹದ ಎದುರೂ ಮಕ್ಕಳ ಜಗಳ!

ಕಾರವಾರ: ಹೆತ್ತವರು ಸಿನಿಮಾದಲ್ಲಿ ಡಾ.ರಾಜ್‌ಕುಮಾರ್‌ ಹಾಡಿದ ಸೂಪರ್‌ ಹಿಟ್‌ ಹಾಡನ್ನು ಇಲ್ಲಿ ಹೇಳಲೇಬೇಕು. 'ಮಕ್ಕಳು ಬೇಕು ಅಂತಾರೆ ಮಕ್ಕಳು ಇರದವರು, ಮಕ್ಕಳೆ ಇರದವರು. ಮಕ್ಕಳೆ ಬೇಡ ಅಂತಾರೆ ಮಕ್ಕಳ ಹೆತ್ತವರು..' ಅನ್ನೋ ಹಾಡದು. ಪ್ರತಿ ಸಾಲಿನಲ್ಲಿ ಮಕ್ಕಳಿಂದ ಹೆತ್ತವರಿಗೆ ಆಗೋ ನೋವುಗಳನ್ನು ತಿಳಿಸಲಾಗಿತ್ತು. ಬಹುಶಃ ಕಾರವಾರದ ಈ ಹಿರಿಜೀವ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಓದಿದರೆ, ಈ ಹಾಡು ನೆನಪಾಗದೇ ಇರದು. ಕಾರವಾರದಲ್ಲಿ  ಮಕ್ಕಳ ಕಾಟಕ್ಕೆ ಬೇಸತ್ತು ನಾಲ್ಕು ಮಹಡಿ ಕಟ್ಟಡದಿಂದ ಹಾರಿ ಹಿರಿಯ ಜೀವವೊಂದು ಆತ್ಮಹತ್ಯೆ ಮಾಡಿಕೊಂಡಿದೆ. ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಂಕರಮಠ ರಸ್ತೆಯ ಮನೋಹರ್ ಅಪಾರ್ಟಮೆಂಟ್‌ನ ನಾಲ್ಕನೇ ಮಹಡಿಯಿಂದ ಹಾರಿ ಸಾವು ಕಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಶಂಕರಮಠ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು 76 ವರ್ಷದ ಕೃಷ್ಣಾನಂದ ಶಿವರಾಮ ಪಾವಸ್ಕರ ಎಂದು ಗುರುತಿಸಲಾಗಿದೆ.

ಮೃತದೇಹದ ಎದುರೂ ಮಕ್ಕಳ ಜಗಳ: ಇನ್ನು ತಂದೆಯ ಮೃತ ದೇಹದ ಮುಂದೆ ಮಕ್ಕಳಿಬ್ಬರು ಜಗಳವಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಎಂದು ಹಿರಿಯ ಮಗ ಸಂಜಯ ಪಾವಸ್ಕರ್ ಆರೋಪ ಮಾಡಿದ್ದಾರೆ. ನಮ್ಮ ಅಪ್ಪನಿಗೆ ಇಷ್ಟು ದೊಡ್ಡ ಕಟ್ಟಡದ ಮೇಲೆ ಹೋಗೊಕೆ ಆಗಲ್ಲ. ನಮ್ಮ ಅಪ್ಪ ಒಬ್ಬರೇ ಅಷ್ಟು ಎತ್ತರಕ್ಕೆ ಹೋಗಲು ಸಾಧ್ಯವಿಲ್ಲ. ಇದು ಸರಿಯಾದ ತನಿಖೆ ಆಗಬೇಕು, ಇಲ್ಲದೇ ಇದ್ದಲ್ಲಿ ನಾವು ಹೆಣ ತೆಗೆದುಕೊಂಡು ಹೋಗೋಕೆ ಬಿಡಲ್ಲ ಅಂತಾ ದೊಡ್ಡ ಮಗ ಸಂಜಯ ಪಾವಸ್ಕರ ಪಟ್ಟು ಹಿಡಿದಿದ್ದರು.

ಮೂವರು ಮಕ್ಕಳನ್ನು ಹೊಂದಿರುವ ಕೃಷ್ಣಾನಂದಗೆ ಮಕ್ಕಳಿಂದ ನೆಮ್ಮದಿ ಹಾಳಾಗಿತ್ತು. ಕಳೆದ ಕೆಲವು ದಿನಗಳಿಂದ ಮೂವರು ಮಕ್ಕಳು ಜಗಳ ಮಾಡಿಕೊಂಡಿದ್ದರು. ಕಾರವಾರ ನಗರದಲ್ಲೇ ಮೂವರು ಮಕ್ಕಳು ಪ್ರತ್ಯೇಕವಾಗಿ ವಾಸವಾಗಿದ್ದರು. ಮೂವರು ಮಕ್ಕಳಿಗೆ ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಕೆಲವು ದಿನದ ಹಿಂದೆ ತಾಯಿಯನ್ನು ಮಾತಾಡಿಸಲು ಬಂದಾಗ ಹಿರಿಯ ಮಗನಿಗೆ ಮಾತಾಡೋಕೆ ಕೊಡದ ಕಿರಿಯ ಮಗ. ಕಳೆದ ಕೆಲವು ತಿಂಗಳಿನಿಂದ ಕಿರಿಯ ಮಗನ ಮನೆಯಲ್ಲೇ ಕೃಷ್ಣಾನಂದ ವಾಸವಾಗಿದ್ದರು ಎನ್ನಲಾಗಿದೆ. ಅಪಾರ್ಟ್‌ಮೆಂಟ್‌ನ ಲಿಫ್ಟ್‌ ಹತ್ತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕೂಡ ಸಿಸಿಟಿವಿಯಲ್ಲಿ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ