ಮುಖ್ಯಮಂತ್ರಿ ಆಗುವ ಆಸೆ ಈಡೇರ​ದ್ದಕ್ಕೆ ಯುವಕ ನೇಣಿಗೆ ಶರಣು

Kannadaprabha News   | Asianet News
Published : Oct 08, 2020, 07:23 AM ISTUpdated : Oct 08, 2020, 07:28 AM IST
ಮುಖ್ಯಮಂತ್ರಿ ಆಗುವ ಆಸೆ ಈಡೇರ​ದ್ದಕ್ಕೆ ಯುವಕ ನೇಣಿಗೆ ಶರಣು

ಸಾರಾಂಶ

ಉದ್ಯೋಗ ಅರಸಿ 1 ತಿಂಗಳ ಹಿಂದೆ ಬೆಂಗ​ಳೂ​ರಿಗೆ ಬಂದಿ​ದ್ದ ಯುವಕ| ಬೆಂಗಳೂರಿನ ಜಯನಗರದ 4ನೇ ಹಂತದಲ್ಲಿ ನಡೆದ ಘಟನೆ| ತನ್ನ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಶಾಂಕ್‌| ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಬೆಳಕಿಗೆ ಬಂದ ಘಟನೆ|  

ಬೆಂಗಳೂರು(ಅ.08): ಮುಖ್ಯಮಂತ್ರಿಯಾಗುವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ: ಹಣದಾಸೆ ತೋರಿಸಿ ಕೈಕೊಟ್ಟ ಬಿಜೆಪಿ ಮುಖಂಡ, ಗೃಹಿಣಿ ಆತ್ಮಹತ್ಯೆ

ಬಿಕಾಂ ಪದವಿ ವ್ಯಾಸಂಗ ಮುಗಿಸಿದ್ದ ಶಶಾಂಕ್‌, ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ. ಜಯನಗರದ 4ನೇ ಹಂತದಲ್ಲಿ ಸ್ನೇಹಿತರ ಜತೆ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದ ಆತ, ಕೆಲಸಕ್ಕೆ ಹಲವು ಕಡೆ ಅಲೆದಾಡಿದ್ದ. ಆದರೆ ಎಲ್ಲೂ ಸಹ ಉದ್ಯೋಗ ಸಿಗದಿದ್ದರಿಂದ ಜಿಗುಪ್ಸೆಗೊಂಡಿದ್ದ. ‘ನಾನು ಮುಖ್ಯಮಂತ್ರಿಯಾಗುವ ಗುರಿ ಹೊಂದಿದ್ದೇನೆ. ಆದರೆ ನನ್ನ ಕನಸುಗಳು ಈಡೇರುವುದಿಲ್ಲವೆಂದು ಗೆಳೆಯರ ಜತೆ ಶಶಾಂಕ್‌ ಬೇಸರ ತೋಡಿಕೊಂಡಿದ್ದ’ ಎಂದು ಪೊಲೀಸರು ಹೇಳಿದ್ದಾರೆ.

ಈ ಯಾತನೆಯಲ್ಲೇ ಆತ್ಮಹತ್ಯೆಗೆ ಆತ ನಿರ್ಧರಿಸಿದ್ದಾನೆ. ಎಂದಿನಂತೆ ಬೆಳಗ್ಗೆ 7 ಗಂಟೆ ಸುಮಾರಿಗೆ ಆತನ ಗೆಳೆಯರು ಕೆಲಸಕ್ಕೆ ತೆರಳಿದ್ದಾರೆ. ಆಗ ಏಕಾಂಗಿಯಾಗಿದ್ದ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ನಂತರ ಶಶಾಂಕ್‌ ಮೊಬೈಲ್‌ಗೆ ಗೆಳೆಯರು ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ ಕಾರಣಕ್ಕೆ ಆತಂಕಗೊಂಡ ಅವರು, ಕೂಡಲೇ ಕೊಠಡಿಗೆ ಬಂದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆದರೆ ಯಾವುದೇ ಮರಣಪತ್ರ ಸಿಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?