ಬಾಗಲಕೋಟೆ: ಒಂಟಿತನಕ್ಕೆ ಬೇಸತ್ತು ಯುವಕ ಆತ್ಮಹತ್ಯೆ

Kannadaprabha News   | Asianet News
Published : Oct 28, 2020, 01:46 PM IST
ಬಾಗಲಕೋಟೆ: ಒಂಟಿತನಕ್ಕೆ ಬೇಸತ್ತು ಯುವಕ ಆತ್ಮಹತ್ಯೆ

ಸಾರಾಂಶ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ| ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ ನಡೆದ ಘಟನೆ| ತೀವ್ರ ಮನನೊಂದು ಆತ ತಮ್ಮ ದಾಬಾದಲ್ಲೇ ನೇಣು ಬಿಗಿದು ಆತ್ಮಹತ್ಯೆ|   

ಬಾಗಲಕೋಟೆ(ಅ.28): ತಂದೆ-ತಾಯಿ ಇಬ್ಬರೂ ತೀರಿ ಹೋಗಿದ್ದರಿಂದ, ಒಂಟಿತನಕ್ಕೆ ಬೇಸತ್ತು, ಜೀವನದಲ್ಲಿ ಜಿಗುಪ್ಸೆಯಾಗಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಗೋರಬಾಳ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ಗೋರಬಾಳ ಗ್ರಾಮದ ಭೀಮಸಿ ಲಕ್ಷ್ಮಣ ಚಿತ್ತರಗಿ (22) ಮೃತ ಯುವಕ. ಈತ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ನೂತನವಾಗಿ ಗಡಗಿ ಚಿಕ್ಕನ್‌ ದಾಬಾ ಪ್ರಾರಂಭಿಸಿದ್ದ. ಈಚೆಗೆ ಆತನ ತಂದೆ-ತಾಯಿ ಮೃತಪಟ್ಟಿದ್ದರು. ಹೀಗಾಗಿ ಆತನಿಗೆ ಒಂಟಿತನ ಕಾಡುತಿತ್ತು. ಇದರಿಂದ ತೀವ್ರ ಮನನೊಂದು ಆತ ತಮ್ಮ ದಾಬಾದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಪತ್ನಿ ಆತ್ಮಹತ್ಯೆ

ಈ ಕುರಿತು ಇಳಕಲ್ಲ ಶಹರ ಪಿಎಸೈ ರಮೇಶ ಜಲಗೇರಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!