
ವಿಜಯಪುರ(ಸೆ.21): ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಿನ್ನೆ(ಭಾನುವಾರ) ನಡೆದಿದೆ. ಮೃತನನ್ನ ರುದ್ರೇಶ ಶಿವಪ್ಪ ಕಲಗುಡಿ (33) ಎಂದು ಗುರುತಿಸಲಾಗಿದೆ.
ನಗರದ ಖಾಸಗಿ ಲಾಡ್ಜ್ವೊಂದರಲ್ಲಿ ರುದ್ರೇಶ ಶಿವಪ್ಪ ಕಲಗುಡಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ಶರಣಾದ ಯುವಕನು ಜಿಲ್ಲೆಯ ನಿಡಗುಂದಿ ನಿವಾಸಿ ಎಂದು ಎಂದು ತಿಳಿದು ಬಂದಿದೆ. ಹಣಕಾಸಿನ ವ್ಯವಹಾರದ ಸಮಸ್ಯೆಯಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ