
ಬಾಗಲಕೋಟೆ(ಸೆ.19): ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಸೇತುವೆ ಬಳಿ ಘಟಪ್ರಭಾ ನದಿಗೆ ಹಾರಿದ್ದ ಯುವಕನ ಶವ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ. ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಸಾಬಣ್ಣ ಹಣಮಂತ ಅನಗವಾಡಿ (24) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತನಿಗೆ ಮದುವೆ ಮಾಡುವ ಸಲುವಾಗಿ ತಂದೆ ಕನ್ಯೆಯನ್ನು ನೋಡುತ್ತಿದ್ದ. ಆದರೆ ಬೇಗ ಹೆಣ್ಣು ಸಿಗದೆ ಇದ್ದ ಕಾರಣ. ಗ್ರಾಮದಲ್ಲಿರುವ ತನ್ನದೇ ವಯಸ್ಸಿನವರು ಮದುವೆಯಾಗಿದ್ದಾರೆ. ಆದರೆ ನನಗೆ ಇನ್ನೂ ಹೆಣ್ಣು ಸಿಗುತ್ತಿಲ್ಲ ಎಂದು ಮಾನಸಿಕ ಮಾಡಿಕೊಂಡು ಕಳೆದ 2 ದಿನಗಳ ಹಿಂದೆ (ಸೆ.17ರಂದು) ಘಟಪ್ರಭಾ ನದಿಗೆ ಹಾರಿದ್ದಾನೆ ಎಂದು ತಿಳಿದು ಬಂದಿದೆ.
ಸವದತ್ತಿ: ಪ್ರೀತಿಗಾಗಿ ಸಿಆರ್ಪಿಎಫ್ ಯೋಧ ಆತ್ಮಹತ್ಯೆ
ಯುವಕನನ್ನು ಪತ್ತೆ ಹಚ್ಚಲು ಬೀಳಗಿ ಅಗ್ನಿಶಾಮಕ ದಳ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಶನಿವಾರ ಮಧ್ಯಾಹ್ನ ಮೃತ ಯುವಕನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ