
ಕಲಬುರಗಿ(ಮಾ.12): ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯ ಮೇರೆಗೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಅಫಜಲ್ಪುರ ತಾಲೂಕಿನ ಚಿಂಚೋಳಿ ಗ್ರಾಮದಲ್ಲಿ ನಡೆದಿದೆ.
ಈ ಕುರಿತು ಮೃತನ ತಂದೆ ಸಂಗಣ್ಣ ಮಲ್ಲಪ್ಪ ಜಮಾದಾರ ಅಫಜಲ್ಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರಿನಲ್ಲಿ ಸೈಬಣ್ಣ ಕಂಬಾರತೋಟ, ತುಳಜಪ್ಪ ಜಗದಿ, ಶ್ರೀಮಂತ ಕಂಬಾರತೋಟ, ನಾಗೇಶ ಜಗದಿ, ವಿಜಯಕುಮಾರ ಜಗದಿ, ಗುರುಸಿದ್ದವ್ವ ಕಂಬಾರತೋಟ, ಜ್ಯೋತಿ ಕಂಬಾರತೋಟ ಎಂಬುವವರೆಲ್ಲ ಕೂಡಿಕೊಂಡು ತಮ್ಮ ಮಗನ ಮರ್ಮಾಂಗದ ಮೇಲೆ ಒದ್ದು ಕತ್ತು ಹಿಸುಕಿ, ವಿಷ ಉಣಿಸಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Bengaluru Crime: ಹೆಂಡತಿಯನ್ನು ಮಂಚಕ್ಕೆ ಕರೆದ ಸ್ನೇಹಿತನ ತಲೆಯನ್ನೇ ಸೀಳಿದ ಗಂಡ
ಅಫಜಲ್ಪುರ ಠಾಣೆ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ