ಲವ್‌ ಕೇಸ್‌: ಯುವಕನಿಗೆ ನೇಣು ಹಾಕಿ ಕೊಲೆ..!

Kannadaprabha News   | Asianet News
Published : Jul 29, 2021, 08:32 AM IST
ಲವ್‌ ಕೇಸ್‌: ಯುವಕನಿಗೆ ನೇಣು ಹಾಕಿ ಕೊಲೆ..!

ಸಾರಾಂಶ

* ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದ ಘಟನೆ *  ಯುವತಿಯನ್ನು ಪ್ರೇಮಿಸುತ್ತಿದ್ದ ಕೊಲೆಯಾದ ಯುವಕ *  ತನಿಖೆ ಆರಂಭಿಸಿದ ಪೊಲೀಸರು

ಗಂಗಾವತಿ(ಜು.29):  ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ನೇಣು ಹಾಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜರುಗಿದೆ. 

ಹನುಮೇಶ ವಡ್ಡರ್‌ (22) ಎನ್ನುವಾತ ಕೊಲೆಯಾದ ಯುವಕ. ಹನುಮೇಶ ವಡ್ಡರ್‌ ಅದೇ ಗ್ರಾಮದ ಯುವತಿಯನ್ನು ಪ್ರೇಮಿಸುತ್ತಿದ್ದ. ಅದಕ್ಕೆ ಯುವತಿಯ ತಂದೆ, ತಾಯಿ ಮತ್ತು ಕುಟುಂಬದವರ ವಿರೋಧವಿತ್ತು ಎಂದು ಹೇಳಲಾಗುತ್ತಿದೆ.

ಪ್ರವಾಸಿ ತಾಣದ ಗುಹೆಯಲ್ಲಿ ಪತ್ನಿಯೊಂದಿಗೆ ಸೆಕ್ಸ್ ನಂತರ ಹತ್ಯೆ!

ಯುವತಿಯ ಕಡೆಯವರು ಹನುಮೇಶನನ್ನು ತೋಟ ಒಂದಕ್ಕೆ ಕರೆದುಕೊಂಡು ಹೋಗಿ ನೇಣು ಹಾಕಿ ಕೊಲೆ ಮಾಡಿದ್ದಾರೆ ಎಂದು ಹನುಮೇಶನ ಸಹೋದರ ಪರಶುರಾಮ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!