
ಕಲಬುರಗಿ(ಜೂ.06): ತಂಗಿಯ ಎಂಗೇಜ್ಮೆಂಟ್ಗೆ ತರಕಾರಿ ತರಲು ಹೋಗಿದ್ದ ಅಣ್ಣ ಭೀಕರವಾಗಿ ಕೊಲೆಯಾದ ಘಟನೆ ನಗರದ ಹೊರವಲಯದ ಕೋಟನೂರ ಬಳಿಯ ತರಕಾರಿ ಮಾರ್ಕೆಟ್ನಲ್ಲಿ ಇಂದು(ಭಾನುವಾರ) ನಡೆದಿದೆ. ನಿಖಿಲ್ (24) ಕೊಲೆಯಾದ ದುರ್ದೈವಿಯಾಗಿದ್ದಾನೆ.
ನಿಖಿಲ್ ತಂಗಿ ಪ್ರೀತಿಸುತ್ತಿದ್ದ ಯುವಕನ ಹಾಗೂ ಆತನ ಸ್ನೇಹಿತರು ಸೇರಿ ನಿಖಿಲ್ನನ್ನ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ನಿಖಿಲ್ ತಂಗಿಯ ಎಂಗೇಜ್ಮೆಂಟ್ ಬೇರೊಬ್ಬ ಯುವಕನ ಜೊತೆ ನಾಳೆ(ಸೋಮವಾರ) ನಡೆಯಬೇಕಿತ್ತು. ಹೀಗಾಗಿ ಎಂಗೇಜ್ಮೆಂಟ್ ಕಾರ್ಯಕ್ರಮಕ್ಕಾಗಿ ತಾಯಿ ಮತ್ತು ಅಣ್ಣನೊಂದಿಗೆ ತರಕಾರಿ ಖರೀದಿಗಾಗಿ ನಿಖಿಲ್ ತೆರಳಿದ್ದನು ಎಂದು ತಿಳಿದು ಬಂದಿದೆ.
ಅನಾರೋಗ್ಯದ ಮನೆಯಲ್ಲಿ ಶಾಪದಂಥ ಮಗ...ಮನೆಯೇ ನರಕ!
ತರಕಾರಿ ಖರೀದಿ ವೇಳೆ ಕಾರ್ನಲ್ಲಿ ಬಂದ ವಿಶಾಲ್ ಮತ್ತು ತಂಡದಿಂದ ನಿಖಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಿಖಿಲ್ ಸ್ಥಳದಲ್ಲೇ ಸಾವನ್ನಪ್ಪಿದರೆ ಆತನ ತಾಯಿ, ಅಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲೇ ಯುವಕನ ಬರ್ಬರ ಹತ್ಯೆಯಾಗಿದೆ. ಇದರಿಂದ ಕಲಬುರಗಿ ಜನ ಭಯಭೀತರಾಗಿದ್ದಾರೆ.
ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕಲಬುರಗಿಯ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ