ಯಾದಗಿರಿ: ಕಾಲುವೆಯಲ್ಲಿ ಯುವಕನ ಶವ ಪತ್ತೆ, ಸಂಶಯಾಸ್ಪದ ಸಾವು

Published : Oct 21, 2022, 09:14 PM IST
ಯಾದಗಿರಿ: ಕಾಲುವೆಯಲ್ಲಿ ಯುವಕನ ಶವ ಪತ್ತೆ, ಸಂಶಯಾಸ್ಪದ ಸಾವು

ಸಾರಾಂಶ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗ್ರಾಮದ ವಿಭೂತಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ 

ಶಹಾಪುರ(ಅ.21):  ತಾಲೂಕಿನ ಗ್ರಾಮದ ವಿಭೂತಿಹಳ್ಳಿ ಬಳಿ ಕೆಬಿಜೆಎನ್‌ಎಲ್‌ನ ಡಿಸ್ಟ್ರಿಬ್ಯೂಟರ್‌ 9ರ ಅಡಿಯಲ್ಲಿ ಬರುವ ಲ್ಯಾಟ್ರಿಲ್‌ ಕಾಲುವೆಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಅದು ಅನುಮಾನಾಸ್ಪದ ಸಾವು ಎಂದು ಪಾಲಕರು ಆರೋಪಿಸಿದ್ದಾರೆ. ಮೃತ ಯುವಕ ರಸ್ತಾಪುರ ಗ್ರಾಮದ ಆಂಜನೇಯ ಭೀಮಪ್ಪ ದಾಸರ್‌ (23) ಎಂದು ಗುರುತಿಸಲಾಗಿದೆ.

ಘಟನಾ ವಿವರ:

ಅ.17ರಂದು ಬೆ.6 ಗಂಟೆಗೆ ಆಂಜನೇಯನು ಮನೆಯಿಂದ ಟಂಟಂ ಆಟೋ ತೆಗೆದುಕೊಂಡು ಹೊರಗೆ ಹೋದವನು ರಾತ್ರಿಯಾದರೂ ಮನೆಗೆ ಬರದಿದ್ದನ್ನು ಕಂಡು ಮನೆಯವರು ಯುವಕನ ಗೆಳೆಯರಿಗೆ ಹಾಗೂ ಸಂಬಂಧಿಕರಿಗೆ ವಿಚಾರಿಸಿದ್ದಾರೆ ಹಾಗೂ ಮಗ ಕಾಣೆಯಾಗಿರುವ ಕುರಿತು ಶಹಾಪುರ ಪೊಲೀಸ್‌ ಠಾಣೆಗೆ ಯುವಕನ ತಂದೆ ಭೀಮಪ್ಪ ದಾಸರ್‌ ದೂರು ನೀಡಿರುವುದಾಗಿ ತಿಳಿದು ಬಂದಿದೆ. ಅ.19 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗ್ರಾಮದ ಬಳಿ ಬೀದರ್‌-ಬೆಂಗಳೂರು ರಾಜ್ಯ ಹೆದ್ದಾರಿಯ ಪಕ್ಕದ ಲ್ಯಾಟ್ರಿಲ್‌ ದಂಡೆ ಮೇಲೆ ನಿಮ್ಮ ಟಂಟಂ ಆಟೋ ನಿಂತಿರುವುದಾಗಿ ಪರಿಚಯಸ್ಥರೊಬ್ಬರು ಯುವಕನ ತಂದೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ತಂದೆ ಹಾಗೂ ಸಂಬಂಧಿಕರು ಆಟೋ ನಿಲ್ಲಿಸಿರುವ ಸ್ಥಳಕ್ಕೆ ಬಂದಾಗ ಇದು ತಮ್ಮದೇ ಆಟೋ ಎನ್ನುವದು ಖಾತ್ರಿಯಾಗಿದ್ದು, ಅದರಲ್ಲಿ ಯುವಕನ ಮೊಬೈಲ್‌ ಹಾಗೂ 300 ರು.ಗಳು ದೊರಕಿವೆ. ಕಾಲುವೆ ಮತ್ತು ಸುತ್ತಮುತ್ತ ಜಮೀನಿನಲ್ಲಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿರುವಾಗ ಆಟೋ ನಿಲ್ಲಿಸಿದ ಜಾಗದಿಂದ ಅಂದಾಜು 2ಕಿಮೀ ದೂರದಲ್ಲಿ ಲ್ಯಾಟ್ರಿಲ್‌ನಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದು, ನನ್ನ ಮಗನಿಗೆ ಈಜು ಬರುತ್ತಿತ್ತು. ಇದರಲ್ಲಿ ಕೇವಲ ಎರಡು ಅಡಿ ನೀರು ಹರಿಯುತ್ತಿದೆ. ಈ ಸ್ವಲ್ಪ ನೀರಲ್ಲಿ ನನ್ನ ಮಗ ಸಾಯಲು ಹೇಗೆ ಸಾಧ್ಯ? ಎಂದು ಮೃತ ಯುವಕನ ತಂದೆ ಸಂಶಯ ವ್ಯಕ್ತಪಡಿಸಿ ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಇನ್ಸ್ಟಾಗ್ರಾಮ್ ಸ್ಟಾರ್‌ಗೆ ಗುಂಡಿಕ್ಕಿ ಹತ್ಯೆ

ಶವ ದೊರೆತ ಸ್ಥಳಕ್ಕೆ ಎಎಸ್‌ಐ ಹೊನ್ನಪ್ಪ ಭಜಂತ್ರಿ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶಹಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಈ ಲ್ಯಾಟ್ರಿಲ್‌ನಲ್ಲಿ ಒಂದುವರೆಯಿಂದ ಎರಡು ಅಡಿಯುವರೆಗೆ ಮಾತ್ರ ನೀರು ಹರಿಯುತ್ತದೆ. ಈ ಸ್ವಲ್ಪ ಪ್ರಮಾಣದ ನೀರಿನಲ್ಲಿ ಸಾವು ಸಂಭವಿಸೋದು ಸಾಧ್ಯವಿಲ್ಲ. ಅಂಥದರಲ್ಲಿ 23 ವರ್ಷದ ಯುವಕ ಈ ನೀರಿನಲ್ಲಿ ಸಾಯುವುದು ಅಸಾಧ್ಯ. ದಲಿತ ಯುವಕನ ಸಾವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಯುವಕನ ಸಾವಿನ ಬಗ್ಗೆ ಪೊಲೀಸ್‌ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ ಪೊಲೀಸ್‌ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!