
ಬೆಂಗಳೂರು (ಜು.22) : ಫ್ರಾನ್ಸ್ ದೇಶದ ಪ್ಯಾರೀಸ್ ನಗರದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ. ಆರೋಪಿಯು ಜು.15ರಂದು ಪ್ಯಾರೀಸ್ನಿಂದ ಏರ್ ಫ್ರಾನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ. ವಿಮಾನ ಬೆಂಗಳೂರು ತಲುಪಲು ಇನ್ನು ನಾಲ್ಕು ತಾಸು ಇರುವಾಗ ಏಕಾಏಕಿ ವಿಮಾನದ ಹಿಂಬದಿಯ ಎಡಭಾಗದ ದ್ವಾರದ ತೆರೆಯಲು ಪ್ರಯತ್ನಿಸಿದ್ದಾನೆ.
ಈ ಸಂಬಂಧ ವಿಮಾನದ ಸಿಬ್ಭಂದಿ ನೀಡಿದ ವರದಿ ಮೇರೆಗೆ ಏರ್ ಫ್ರಾನ್ಸ್ ಇಂಡಿಯಾದ ಡ್ಯೂಟಿ ಮ್ಯಾನೇಜರ್ ಶೀಬಾ ಸ್ವಾಮೀನಾಥನ್ ಅವರು ವೆಂಕಟ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಿಕ್ತು 4 ಕೋಟಿಯ ಚಿನ್ನದ ಬಿಸ್ಕತ್: ವ್ಯಕ್ತಿ ಸೆರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ