ಚಿಕ್ಕಬಳ್ಳಾಪುರ: ಅಂಗಡಿ ಮುಂದೆ ಎಂಜಲು ಉಗಿದ ಯುವಕ ಕೊಲೆಯಾದ!

Published : Sep 23, 2020, 02:44 PM IST
ಚಿಕ್ಕಬಳ್ಳಾಪುರ: ಅಂಗಡಿ ಮುಂದೆ ಎಂಜಲು ಉಗಿದ ಯುವಕ ಕೊಲೆಯಾದ!

ಸಾರಾಂಶ

ಕ್ಷುಲ್ಲಕ ಕಾರಣಕ್ಕೆ ಯುವಕಮನ ಹತ್ಯೆ/ ಅಂಗಡಿ ಮುಂದೆ ಎಂಜಲು ಉಗಿದಿದ್ದೆ ತಪ್ಪಾಯಿತು/ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಕರಣ/ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ(ಸೆ. 23)  ಅಂಗಡಿ ಮುಂದೆ ಎಂಜಲು ಉಗಿದ ಎಂಬಕಾರಣಕ್ಕೆ ಯುವಕನ ಕೊಲೆಯೇ ಆಗಿಹೋಗಿದೆ. ತನ್ನ ಅಂಗಡಿ ಮುಂದೆ ಎಂಜಲು  ಉಗಿದ  ಯುವಕನನ್ನು ಅಂಗಡಿ ಮಾಲೀಕ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಪ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಪ್ರಕರಣ ನಡೆದಿದೆ. ಕೊಲೆಗೀಡಾದ ಯುವಕನನ್ನು ಗ್ರಾಮದ ಮುನಿಕೃಷ್ಣ ಎಂದು ಗುರುತಿಸಲಾಗಿದ್ದು ಕೊಲೆ ಆರೋಪಿ ಅದೇ ಗ್ರಾಮದ ಚೇತನ್.

ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ

ಬೆಳಗ್ಗೆ ಚೇತನ್ ಅಂಗಡಿ ಮುಂದೆ ಮುನಿಕೃಷ್ಣ ಬಂದಾಗ ಎಂಜಲು ಉಗಿದಿದ್ದು ಆಗ ಚೇತನ್ ಮುನಿಕೃಷ್ಣಗೆ ಬೈದಿದ್ದಾನೆ. ಆಗ ಇಬ್ಬರ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಚೇತನ್ ಮುನಿಕೃಷ್ಣರನ್ನು ಕೊಲೆ ಮಾಡಿದ್ದಾನೆ. ಗಾಯಗೊಂಡಿದ್ದ ಮುನಿಕೃಷ್ಣರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಮೃತ ಪಟ್ಟಿದ್ದಾನೆ.

ಘಟನೆಯ ಸಂಬಂದ ಚಿಂತಾಮಣಿ ಗ್ರಾಮಾಂತರ ಠಾಣೆ ಸಿಪಿಐ ಕೆ.ಎಂ.ಶ್ರೀನಿವಾಸಪ್ಪ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು ಆರೋಪಿ ಚೇತನ್‌ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೀಡಾದ ಹಾಗೂ ಕೊಲೆ ಮಾಡಿದ ಇಬ್ಬರು ಯುವಕರು ಒಂದೇ ಸಮುದಾಯಕ್ಕೆ ಸೇರಿದವರೆಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ