
ಚಾಮರಾಜನಗರ (ಜ.8): ಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ಸಂಶಯಾಸ್ಪದವಾಗಿ ಯುವಕನೋರ್ವನ ಮೃತದೇಹ ಪತ್ತಯಾಗಿದೆ.
ಮೃತದೇಹ ಕೊಳ್ಳೇಗಾಲದ ಲಿಂಗಾಣಾಪುರದ ನಂದೀಶ್(27) ಎಂದು ಗುರುತಿಸಲಾಗಿದೆ. ಮೃತದೇಹವು ಮೂರು ತುಂಡುಗಳಾಗಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರ ನಿರ್ಲಕ್ಷ್ಯ:
ಮೊನ್ನೆ ರಾತ್ರಿ ಮೈಸೂರಿನಿಂದ ಬಂದಾಗ ಕೊಳ್ಳೇಗಾಲ ಬಸ್ ನಿಲ್ದಾಣದ ಬಳಿ ಮೂವರು ನಂದೀಶ್ ಮೇಲೆ ಹಲ್ಲೆ ನಡೆಸಿದ್ದರೆಂಬ ಆರೋಪಿಸಿದ್ದ ಪೋಷಕರು. ಬಸ್ ನಲ್ಲಿ ತನ್ನ ಪತ್ನಿ ಮೈಮುಟ್ಟಿದ ಎಂದು ನಂದೀಶ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದ ವ್ಯಕ್ತಿಗಳು. ನಂದೀಶ್ನನ್ನು ಅಟ್ಟಾಡಿಸಿಕೊಂಡು ಹೋಗಿದ್ದ ಮೂವರು ವ್ಯಕ್ತಿಗಳು. ಆ ಬಳಿಕ ನಂದೀಶ್ ಮನೆಗೆ ವಾಪಾಸ್ಸಾಗಿರಲಿಲ್ಲ. ಹೀಗಾಗಿ ಪೊಲೀಸರಿಗೆ ದೂರು ನೀಡಲು ಹೋಗಿದ್ದ ಪೋಷಕರು. ಆದರೆ ದೂರು ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದರು. ಇದಾಗಿ ಮಾರನೇ ದಿನವೇ ಯಶವಂತಪುರದ ರೈಲು ಹಳಿಯಲ್ಲಿ ಮೂರು ತುಂಡುಗಳಾಗಿ ಪತ್ತೆಯಾಗಿದ್ದಾನೆ. ತಮ್ಮ ಮಗನನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ, ಕೊಲೆ ಶಂಕೆ
ಪೋಷಕರ ದೂರು ಗಂಭೀರವಾಗಿ ಪರಿಗಣಿಸಿ ಕೇಸ್ ದಾಖಲಿಸಿ ವಿಚಾರಣೆ ನಡೆಸಿದ್ದರೆ ಕೊಲೆಯಾಗುತ್ತಿರಲಿಲ್ಲ. ಪೊಲೀಸರ ನಿರ್ಲಕ್ಷ್ಯವೇ ಸಾವಿಗೆ ಕಾರಣವಾಯಿತೇ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ