
ದಾವಣಗೆರೆ (ಜು. 16): ಸ್ನಾನ ಮಾಡಲು ಹೋಗಿ ತುಂಗಾಭದ್ರ ನದಿಯಲ್ಲಿ (Tungabhadra River) ಯುವಕ ಕೊಚ್ಚಿ ಹೋಗಿದ್ದಾನೆ. ದಾವಣಗೆರೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಬಳಿ ತುಂಗಾಭದ್ರ ನದಿ ತುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರಾಜಗೊಂಡನಹಳ್ಳಿ ತಾಂಡದ ಪರಮೇಶ್ ನಾಯ್ಕ್(35) ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ. ಪರಮೇಶ್ ನಾಯ್ಕ್ ಕುಟುಂಬ ಸಮೇತರಾಗಿ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಬಂದಿದ್ದರು. ನದಿ ಪಾತ್ರಕ್ಕೆ ಯಾರು ಹೋಗಬಾರದು ಎಂದು ಸೂಚನೆ ನೀಡಿದರೂ ಯುವಕ ದುಸ್ಸಾಹಸಕ್ಕೆ ಕೈ ಹಾಕಿದ್ದ.
ನದಿಯಲ್ಲಿ ಇಳಿದು ಸ್ನಾನ ಮಾಡುವಾಗ ನೀರಿನ ರಭಸಕ್ಕೆ ಯುವಕ ಕೊಚ್ವಿಹೋಗಿದ್ದಾನೆ. ಸ್ಥಳಕ್ಕೆ ಮಲೆಬೆನ್ನೂರು ಠಾಣೆ ಪೊಲೀಸರು, ಹರಿಹರ ತಾಹಶೀಲ್ದಾರ್ ಭೇಟಿ ನೀಡಿದ್ದಾರೆ. ಮುಳುಗು ತಜ್ಞರ ತಂಡದಿಂದ ಪರಮೇಶ್ ನಾಯ್ಕ್ಗಾಗಿ ಹುಡುಕಾಟ ನಡೆಯುತ್ತಿದೆ. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮಳೆಯಿಂದ ತಪ್ಪಿಸಿಕೊಳ್ಳಲು ಆಸರೆಗೆ ನಿಂತಿದ್ದ ಕುರಿಗಳ ಮೇಲೆ ಹರಿದ ರೈಲು: ಮಳೆಯಿಂದ ತಪ್ಪಿಸಿಕೊಳ್ಳಲು ಆಸರೆಗೆ ನಿಂತಿದ್ದ ಕುರಿಗಳ ಮೇಲೆ ರೈಲು ಹರಿದಿದೆ. ಮಳೆಯಿಂದಾಗಿ ಬ್ರಿಡ್ಜ್ ಕೆಳಗೆ ಆಸರೆಗೆ ನಿಂತಿದ್ದ 40ಕ್ಕು ಅಧಿಕ ಕುರಿಗಳ ಸಾವನ್ನಪ್ಪಿವೆ. ವಿಜಯಪುರ ಜಿಲ್ಲೆ ಕೂಡಗಿ ರೈಲು ನಿಲ್ದಾಣದ ಬಳಿ ಘಟನೆ ನಡೆದಿದೆ. ಮಳೆಯಿಂದಾಗಿ ಆಸರೆಗೆಂದದು ಬ್ರಿಡ್ಜ್ ಕೆಳಗಿನ ರೈಲ್ವೇ ಟ್ರಾಕ್ ಮೇಲೆ ಕುರಿಗಳು ನಿಂತಿದ್ದವು.
ಇದನ್ನೂ ಓದಿ: ಮೀನು ಹಿಡಿಯಲು ಹೋದ ವೇಳೆ ತೆಪ್ಪ ಮಗುಚಿ ಇಬ್ಬರು ಸಾವು
ಈ ವೇಳೆ ವೇಗವಾಗಿ ರೈಲು ಬಂದಿದ್ದು, ರೈಲು ಹಳಿ ನಡುವೆ ಕುರಿಗಳು ಸಿಕ್ಕಿಹಾಕಿಕೊಂಡಿವೆ. ಸ್ಥಳದಲ್ಲೆ 40ಕ್ಕು ಅಧಿಕ ಕುರಿಗಳ ಸಾವನ್ನಪ್ಪಿದ್ದು ಪರಿಹಾರಕ್ಕಾಗಿ ಸ್ಥಳದಲ್ಲಿ ಕುರಿಗಾಯಿ ಕಣ್ಣೀರು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ