
ಮಳವಳ್ಳಿ (ಜೂ.25): ವಸತಿ ಗೃಹದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ತಾಲೂಕಿನ ಕುಂದೂರು ಗ್ರಾಮದ ಸಿದ್ದಪ್ಪರ ಪುತ್ರ ಕೆ.ಎಸ್.ಸುನೀಲ್ (28) ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡವರು. ಮೈಸೂರು ರಸ್ತೆಯ ವಸತಿ ಗೃಹವೊಂದರಲ್ಲಿ ಸೋಮವಾರ ರಾತ್ರಿ ರೂಮ್ ಅನ್ನು ಬಾಡಿಗೆಗೆ ಪಡೆದಿದ್ದ ಕೆ.ಎಸ್.ಸುನೀಲ್ಮಂ ಗಳವಾರ ಮಧ್ಯಾಹ್ನವಾದರೂ ಹೊರಬಾರದ ಹಿನ್ನೆಲೆಯಲ್ಲಿ ವಸತಿ ಗೃಹದ ಸಿಬ್ಬಂದಿ ಪರಿಶೀಲಿಸಿದಾಗ ಆತ್ಮ ಹ ತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ವಸತಿಗೃಹದ ವ್ಯವಸ್ಥಾಪಕ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಪರಿಚಿತ ವ್ಯಕ್ತಿ ಶವ ಪತ್ತೆ
ಮದ್ದೂರು: ಪಟ್ಟಣದ ಮೈಸೂರು - ಬೆಂಗಳೂರು ಸರ್ವಿಸ್ ರಸ್ತೆಯ ಪಕ್ಕದ ಮಿಲ್ಕ್ ಪಾರ್ಲರ್ ಹತ್ತಿರ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಮೈತಪಟ್ಟ ವ್ಯಕ್ತಿಯು ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಬಿಳಿ ಮಿಶ್ರಿತತಲೆ ಕೂದಲು, ಕುರುಚಲು ಗಡ್ಡ ಮೀಸೆ ಬಿಟ್ಟಿದ್ದು ಮೇಲ್ಬಾಗದ ಒಂದು ಹಲ್ಲು ಕೆಳತುಟಿಯ ಮೇಲಿದ್ದು, ಬಲಗೈನಲ್ಲಿ ‘ಜಯಮ್ಮ’ ಎಂದು ಹಸಿರು ಹಚ್ಚೆ ಇದ್ದು, ಎಡಗೈನಲ್ಲೂ ಅಸ್ಪಷ್ಟವಾದ ಹಚ್ಚೆ ಇದೆ. ಒಂದು ಬಿಳಿ ಬಣ್ಣದ ಕೊಳಕಾದ ಶರ್ಟ್, ಒಂದು ಕೊಳಕಾದ ಗ್ರೇ ಬಣ್ಣದ ಪ್ಯಾಂಟ್ ಹಾಗೂ ಸೊಂಟದಲ್ಲಿ ಒಂದು ಎಳೆ ಕಪ್ಪು ಉಡುದಾರ ಧರಿಸಿರುತ್ತಾರೆ. ಮೃತ ಅಪರಿಚಿತ ಗಂಡಸಿನ ವಾರಸುದಾರರಿದ್ದಲ್ಲಿ ದೂ.08232-232170/468245 /ಮೊ-9480804869 / 08232-224888 ಅನ್ನು ಸಂಪರ್ಕಿಸುವಂತೆ ಮದ್ದೂರು ಠಾಣೆ ಪೊಲೀಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ