ಮನೆ ಮುಂದೆ ಉಗಿಯಬೇಡ ಎಂದಿದ್ದಕ್ಕೆ 11  ಪಾರಿವಾಳಗಳನ್ನು ಕೊಂದ ಪಾಪಿ

Published : Sep 29, 2020, 05:54 PM IST
ಮನೆ ಮುಂದೆ ಉಗಿಯಬೇಡ ಎಂದಿದ್ದಕ್ಕೆ 11  ಪಾರಿವಾಳಗಳನ್ನು ಕೊಂದ ಪಾಪಿ

ಸಾರಾಂಶ

ಕ್ಷುಲ್ಲಕ ಕಾರಣಕ್ಕೆ ಮೂಕ ಪ್ರಾಣಿಗಳ ಜೀವ ತೆಗೆದ/  ಮನೆ ಮುಂದೆ ಉಗಿಯಬೇಡ ಎಂದಿದ್ದಕ್ಕೆ ಪ್ರತೀಕಾರ/ಪಕ್ಕದ ಮನೆಯವನ ಹನ್ನೊಂದು ಪಾರಿವಾಳಗಳ ಹತ್ಯೆ/ ಹತ್ಯೆ ಮಾಡಿದ ಆರೋಪಿ ಪರಾರಿ

ಬಾಗಪತ್ (ಸೆ. 29)  ಕ್ಷುಲ್ಲಕ ಕಾರಣಕ್ಕೆ ಇಲ್ಲೊಬ್ಬ ದುರುಳ ಪಕ್ಕದ ಮನೆಯವನ ಹನ್ನೊಂದು ಪಾರಿವಾಳಗಳನ್ನು ಹತ್ಯೆ ಮಾಡಿದ್ದಾನೆ.  ಮನೆಯ ಮುಂದೆ ಉಗುಳಿದ ಕಾರಣಕ್ಕೆ ಮೂಕ ಪ್ರಾಣಿಗಳು ಜೀವ ಕಳೆದುಕೊಂಡಿವೆ.

ಹಗ್ಗವೊಂದನ್ನು ಬಳಸಿ ಪಕ್ಕದ ಮನೆಗೆ ತೆರಳಿದ ಯುವಕ  ರಾಹುಲ್ ಸಿಂಗ್ ಪಕ್ಕದ ಮನೆಯ ಧರ್ಮ್ ಪಾಲ್ ಸಿಂಗ್ ಗೆ ಸೇರಿದ್ದ ಪಾರಿವಾಳ ಹತ್ಯೆ ಮಾಡಿದ್ದಾನೆ.  ಪಂಜರದಲ್ಲಿದ್ದ ಪಾರಿವಾಳಗಳ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.

ಸಾಕು ಪ್ರಾಣಿಗಳ ಸಾವಿನಿಂದ ನೊಂದ ಧರಂಪಾಲ್ ಸಿಂಗ್ ಸತ್ತ ಪಾರಿವಾಳಗಳ ವಿಡಿಯೋ ಮಾಡಿ ದೂರು ದಾಖಲಿಸಿದ್ದಾರೆ. ರಾಹುಲ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಘಟನೆಯ ನಂತರ ಪರಾರಿಯಾಗಿದ್ದಾನೆ.

ರಾಹುಲ್ ನಮ್ಮ ಮನೆಯ ಮುಂದೆ ಉಗುಳುತ್ತಲೇ ಇದ್ದ. ಕೊರೋನಾ  ಇದೆ, ಹಾಗೆಲ್ಲ ಮಾಡಬೇಡ ಎಂದಿದ್ದಕ್ಕೆ  ಇಂಥ ಕೆಲಸ ಮಾಡಿದ್ದಾನೆ. ನಾವು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅಂಗಡಿ ಮುಂದೆ ಉಗಿದ ಎಂಬ ಕಾರಣಕ್ಕೆ  ಕೋಲಾರದಲ್ಲಿ ಯುವಕನೊಬ್ಬನ ಕೊಲೆಯೇ ಆಗಿಹೋಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!