ಮಂಗಳೂರು: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ತಲವಾರು ಬೀಸಿದ ಪುಂಡರು

Published : Feb 27, 2023, 02:30 AM IST
ಮಂಗಳೂರು: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ತಲವಾರು ಬೀಸಿದ ಪುಂಡರು

ಸಾರಾಂಶ

ಮಂಗಳೂರು ನಗರದ ಹೊರವಲಯದ ಚಿತ್ರಾಪುರ ಮೊಗವೀರ ಮಹಾಸಭಾ ವ್ಯಾಪ್ತಿಯ ಬೀಚ್‍ ಬಳಿ ನಡೆದ ಘಟನೆ. 

ಮಂಗಳೂರು(ಫೆ.27):  ಗಾಂಜಾ ಅಮಲಿನಲ್ಲಿ ಯುವಕರ ತಂಡವೊಂದು ರಿಕ್ಷಾ ಚಾಲಕನ ಮೇಲೆ ತಲವಾರು ಬೀಸಿದ ಘಟನೆ ಮಂಗಳೂರು ನಗರದ ಹೊರವಲಯದ ಚಿತ್ರಾಪುರ ಮೊಗವೀರ ಮಹಾಸಭಾ ವ್ಯಾಪ್ತಿಯ ಬೀಚ್‍ ಬಳಿ ನಿನ್ನೆ(ಭಾನುವಾರ) ನಡೆದಿದೆ. 

ಗಾಂಜಾ ಅಮಲಿನಲ್ಲಿ ತಲವಾರು ಬೀಸಿದ ಪರಿಣಾಮ ರಿಕ್ಷಾ ಚಾಲಕ ಸುನೀಲ್‌ಗೆ ಗಾಯವಾಗಿದೆ. ಚಾಲಕನಿಗೆ ತಲವಾರು ಬೀಸಿದ ಪುಂಡರು ರಿಕ್ಷಾಗೆ ಹಾನಿ ಮಾಡಿದ್ದಾರೆ. ಈ ಸಂಬಂಧ ಓರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. 

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ

ಘಟನೆಯನ್ನ ಖಂಡಿಸಿದ ಸ್ಥಳೀಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ಮಾಹಿತಿ ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಬೀಚ್‍ನಲ್ಲಿ ಗಾಂಜಾ ಮಾರಾಟ, ಗಾಂಜಾ ಸೇವನೆ, ಅನೈತಿಕ ಚಟುವಟಿಕೆ ನಡೆಯುತ್ತಿದೆ. ಗ್ರಾಮಸ್ಥರು ಇದನ್ನ ವಿರೋಧಿಸಿ ಬೀಚ್‍ಗೆ ಬಾರದಂತೆ ಎಚ್ಚರಿಕೆ ನೀಡಿದ ದ್ವೇಷದಿಂದ   ರಿಕ್ಷಾ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ ಅಂತ ಆರೋಪಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?