Udupi: ಡ್ರಗ್ಸ್ ವಿರುದ್ಧ ಸಮರ ಸಾರಿದ ಮಾಹೆ ಆಡಳಿತ ಮಂಡಳಿ, ಬರೋಬ್ಬರಿ 42 ವಿದ್ಯಾರ್ಥಿಗಳು ಅಮಾನತು!

By Gowthami KFirst Published Feb 23, 2023, 6:03 PM IST
Highlights

ಮಣಿಪಾಲ ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ಶಮನ ಮಾಡಲುವ ನಿಟ್ಟಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಬರೋಬ್ಬರಿ 42 ಮಂದಿ ವಿದ್ಯಾರ್ಥಿಗಳನ್ನು ಅಮಾನುತು ಮಾಡಿದೆ. 

ಉಡುಪಿ (ಫೆ.23): ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ತನ್ನ ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ಶಮನ ಮಾಡಲುವ ನಿಟ್ಟಿನಲ್ಲಿ ಬಹಳ ಕಠಿಣ ನಿರ್ಧಾರ ಕೈಗೊಳ್ಳುತ್ತಿದೆ. ಮಾದಕ ವ್ಯಸನದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯೊಂದಿಗೆ, MAHE ಆಡಳಿತ ಅಧಿಕಾರಿಗಳು ಡ್ರಗ್ ಸೇವನೆಯಲ್ಲಿ ತೊಡಗಿದ್ದಕ್ಕಾಗಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತುಗೊಳಿಸಿದ್ದಾರೆ. ಇದಕ್ಕೂ ಮೊದಲು, MAHE ಇಬ್ಬರು ವಿದ್ಯಾರ್ಥಿಗಳನ್ನು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅಮಾನತುಗೊಳಿಸಿತ್ತು. 

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನೀಡಿದ ವರದಿಯಲ್ಲಿ, MAHE ತನ್ನ ನಿಲುವುಗಳನ್ನು ಸ್ಪಷ್ಟಪಡಿಸಿದೆ, “MAHE ಯ ದೃಷ್ಟಿಕೋನವು ಪ್ರಮುಖ ವಿಶ್ವವಿದ್ಯಾನಿಲಯವಾಗಿದ್ದು, ಎಲ್ಲಾ ವಿದ್ಯಾರ್ಥಿ ಸಮುದಾಯದ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಉತ್ಕೃಷ್ಟಗೊಳಿಸಲು ಜ್ಞಾನವನ್ನು ಪ್ರಸಾರ ಮಾಡುವ ಮತ್ತು ಅನ್ವಯಿಸುವ ಮತ್ತು ನೈತಿಕ ಮತ್ತು ಬೌದ್ಧಿಕ ಮೌಲ್ಯಗಳನ್ನು ತುಂಬುವ ಮೂಲಕ ಶ್ರೇಷ್ಠತೆಯ ಅನ್ವೇಷಣೆಗೆ ಸಮರ್ಪಿಸಲಾಗಿದೆ.

Latest Videos

ಮಾರ್ಚ್ 2021 ರಲ್ಲಿ, MAHE ಕ್ಯಾಂಪಸ್‌ನಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಮಾದಕವಸ್ತು ಕಳ್ಳಸಾಗಣೆಯನ್ನು ಎದುರಿಸಲು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಧನಸಹಾಯ ಪಡೆದ ನಶಾ ಮುಕ್ತ ಭಾರತ್ ಅಭಿಯಾನ್ (NMBA) ಎಂಬ ಉನ್ನತ ಆದ್ಯತೆಯ ವರ್ಷಪೂರ್ತಿ ಯೋಜನೆಯನ್ನು  ಉಡುಪಿ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡಲು ನಮಗೆ ವಹಿಸಲಾಗಿದೆ.  NMBA ಸಹಕಾರದೊಂದಿಗೆ MAHE ಯ ಯುವ ನಾಯಕರನ್ನು ಒಳಗೊಂಡ 'ನಶ ಮುಕ್ತ ಉಡುಪಿ ಅಭಿಯಾನ' ಎಂಬ ನಮ್ಮ ಯೋಜನೆಯನ್ನು ಉಡುಪಿ ಜಿಲ್ಲಾ ಅಧಿಕಾರಿಗಳ ಬೆಂಬಲದೊಂದಿಗೆ ವಿದ್ಯಾರ್ಥಿ ವ್ಯವಹಾರಗಳ ಇಲಾಖೆ MAHE ಯಶಸ್ವಿಯಾಗಿ ನಡೆಸಿದೆ.

MAHE ಆಡಳಿತವು ತನ್ನ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಕಲಿಕೆಯ ವಾತಾವರಣವನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಆರೋಗ್ಯಕರ ಕಲಿಕೆಯ ಅನುಭವವನ್ನು ಸಕ್ರಿಯಗೊಳಿಸಲು ಸಹಾಯ ಮಾಡಿದ ಉಡುಪಿ ಜಿಲ್ಲಾ ಪೊಲೀಸರಿಗೆ ಧನ್ಯವಾದಗಳನ್ನು ಸಲ್ಲಿಸಿದೆ. ಮಾದಕ ದ್ರವ್ಯ ಸೇವನೆ ಮತ್ತು ಕಳ್ಳಸಾಗಣೆಯನ್ನು ಎದುರಿಸಲು ಮುಂಬರುವ ದಿನಗಳಲ್ಲಿಯೂ ತನ್ನ ಸಂಪೂರ್ಣ ಬೆಂಬಲ ನೀಡುವುದಾಗಿ ಮಾಹೆ ಹೇಳಿದೆ.

ಬೆಳಗಾವಿ ಜನರನ್ನೇ ಬೆಚ್ಚಿ ಬೀಳಿಸಿದ್ದ ಖತರ್ನಾಕ್ ಕಿಡ್ನಾಪ್ ಗ್ಯಾಂಗ್ ಕೊನೆಗೂ ಅರೆಸ್ಟ್!

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದೇವೆ. ಈ ಕಾರ್ಯಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ಪಡೆದಿದ್ದೇವೆ. ಪೆಡ್ಲರ್ ಗಳ ಮೂಲಕ ಗ್ರಾಹಕರು ಯಾರು ಎಂಬುದು ತಿಳಿದುಬಂದಿದೆ. ಕೆಲ ಗ್ರಾಹಕರಿಂದ ಪೆಡ್ಲರ್ ರ್ಗಳು ಯಾರು ಎಂಬುದು ಕೂಡ ನಮಗಡ ತಿಳಿದಿದೆ. ಮಾಹೆಯ ಕೆಲ ವಿದ್ಯಾರ್ಥಿಗಳು ಕೂಡ ಪೆಡ್ಲೆರ್ ಗಳಾಗಿದ್ದು, ಅವರಿಂದ ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿದೆ. ಈ ಪ್ರಕರಣ ಸಂಬಂಧ ನಾವು ವಿವಿಗೆ ಮಾಹಿತಿ ರವಾನಿಸಿದ್ದೆವು ಎಂದಿದ್ದಾರೆ.

ರೇಪ್‌ ಶಿಕ್ಷೆಯಿಂದ ಬಚಾವ್‌ ಆಗಲು ಮದುವೆಯಾದ, ಅದರ ಬೆನ್ನಲ್ಲೇ 'ತಲಾಕ್‌' ಎಂದ!

ಉಡುಪಿ ಮತ್ತು ಮಣಿಪಾಲ ಭಾಗದಲ್ಲಿ ಉಡುಪಿ ಜಿಲ್ಲಾ ಪೊಲೀಸರಿಂದ ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳು ಮುಂದುವರಿದಿದೆ.  ಕಳೆದ ಆರು ತಿಂಗಳಿನಿಂದ ಪೊಲೀಸ್‌ ಇಲಾಖೆ ನಿರಂತರವಾಗಿ ಡ್ರಗ್ಸ್ ವಿರುದ್ಧ ಸಮರ ಸಾರಿದೆ. ಜಿಲ್ಲೆಯಲ್ಲಿ ಪ್ರತಿದಿನಕ್ಕೊಂದರಂತೆ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿದೆ‌. ಮುಖ್ಯವಾಗಿ ವಿದ್ಯಾರ್ಥಿಗಳು ತಮಗೆ ತಿಳಿದೇ ಈ ರೀತಿಯ ಮಾದಕ ವಸ್ತು ಪ್ರಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಕಾಲೇಜಿನವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದರಿಂದ ಉಳಿದ ವಿದ್ಯಾರ್ಥಿಗಳಿಗೆ ಸಂದೇಶ ರವಾನಿಸಿದಂತಾಗುತ್ತದೆ ಎಂಬ ನಿಟ್ಟಿನಲ್ಲಿ ಅಮಾನತು ಅಸ್ತ್ರವನ್ನು ಮಾಡಲಾಗುತ್ತಿದೆ.
 

click me!