ಧರ್ಮಸ್ಥಳ ಪ್ರಕರಣದ 4ನೇ ಪಾಯಿಂಟ್‌ ಕಾರ್ಯಾಚರಣೆ ಅಂತ್ಯ, ಯಾವುದೇ ಕಳೇಬರ ಪತ್ತೆ ಇಲ್ಲ

Published : Jul 30, 2025, 05:17 PM ISTUpdated : Jul 30, 2025, 05:34 PM IST
dharmasthala

ಸಾರಾಂಶ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ಇದೀಗ ಎಸ್ಐಟಿ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಇದೀಗ 4ನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳ (ಜು.30) ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ಕುತೂಹಲ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸುತ್ತ ಮುತ್ತ ಶವಗಳ ಹೂತಿಟ್ಟ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ನಡೆಸುತ್ತಿದೆ. ದೂರುದಾರ ಸೂಚಿಸಿದ 4ನೇ ಸ್ಥಳ ಅಗೆಯಲಾಗಿದೆ. 6 ಅಡಿ ಬಳಿಕವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಮುಸುಕುದಾರಿ ದೂರುದಾರ ಸೂಚಿಸಿದ ಆರಂಭಿಕ ನಾಲ್ಕೂ ಸ್ಥಳದಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. 4ನೇ ಸ್ಥಳದಲ್ಲೂ 6 ಅಡಿ ಆಳದವರಗೆ ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಒಂದು, ಎರಡು, ಮೂರು, ನಾಲ್ಕು, ಸಿಗಲಿಲ್ಲ ಕಳೇಬರ

ಮುಸುಕುದಾರಿ ದೂರುದಾರ ಮೊದಲ ದಿನದ ಸ್ಥಳ ಮಹಜರು ವೇಳೆ 13 ಸ್ಥಳಗಳನ್ನು ಗುರುತಿಸಿದ್ದರು. ಆದರೆ ಈ ಪೈಕಿ ನಾಲ್ಕು ಸ್ಥಳಗಳಲ್ಲಿ ಉತ್ಖನನ ಕಾರ್ಯಾಚರಣೆ ಮಾಡಲಾಗಿದೆ. ನಾಲ್ಕನೇ ಸ್ಥಳದ ಕಾರ್ಯಾಚರಣೆಯೂ ಅಂತ್ಯವಾಗಿದೆ. ನಾಲ್ಕು ಸ್ಥಳಗಳಲ್ಲಿ 6 ಅಡಿ ಅಗೆದು ಪರಿಶೀಲನೆ ನಡೆಸಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಇದಕ್ಕೂ ಮೊದಲು ಮೂರು ಸ್ಥಳದಲ್ಲಿ ಅಗೆದು ಪರಿಶೀಲನೆ ನಡೆಸಲಾಗಿತ್ತು. ಎಲ್ಲಾ ಸ್ಥಳದಲ್ಲೂ 6 ಅಡಿ ಆಳದವರಗೆ ಅಗೆದು ಪರೀಶೀಲನೆ ನಡೆಸಲಾಗಿದೆ. ಆದರೆ ಯಾವುದೇ ಕಳೇಬರಹ ಪತ್ತೆಯಾಗಿಲ್ಲ.

ನೂರಾರು ಶವ ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ದೂರುದಾರ

ಮುಸುಕುದಾರಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತ ನೂರಾರು ಶವಗಳನ್ನು ಹೂತಿದ್ದೇನೆ. ಪ್ರಭಾವಿಗಳ ಸೂಚನೆ ಮೇರೆಗೆ ಗೌಪ್ಯವಾಗಿ ಶವಗಳನ್ನು ಹೂತಿಡಲಾಗಿದೆ. ಪೊಲೀಸರು ತನಿಖೆ ಮಾಡಿದರೆ ಎಲ್ಲವೂ ಬಯಲಾಗಲಿದೆ. ಶವ ಹೂತಿಟ್ಟ ಜಾಗ ತೋರಿಸುತ್ತೇನೆ ಎಂದಿದ್ದ. ಇದರಂತೆ ಎಸ್ಐಟಿ ಅಧಿಕಾರಿಗಳು ದೂರುದಾರನ ಕರೆದುಕೊಂಡು ನೇತ್ರಾವತಿ ಸ್ನಾನಘಟ್ಟದ ಬಳಿ ಸ್ಥಳ ಮಹಜರು ಮಾಡಲಾಗಿತ್ತು. ಮೊದಲ ದಿನದ ಸ್ಥಳ ಮಹಜರು ವೇಳೆ 13 ಸ್ಥಳಗಳನ್ನು ಗುರುತಿಸಲಾಗಿತ್ತು. ಈ ಪೈಕಿ ನಾಲ್ಕು ಸ್ಥಳದಲ್ಲಿ ಉತ್ಖನನ ಮಾಡಲಾಗಿದೆ. ನಾಲ್ಕರಲ್ಲೂ ಯಾವುದೇ ಕಳೇಬರಹ ಪತ್ತೆಯಾಗಿಲ್ಲ.

4 ರಿಂದ 6 ಅಡಿಯಲ್ಲಿ ಮೃತದೇಹ ಹೂತಿಟ್ಟಿರುವುದಾಗಿ ಹೇಳಿದ್ದ ದೂರುದಾರ

ದೂರುದಾರ ಗುರುತಿಸಿದ ಮೊದಲ ಸ್ಥಳದಲ್ಲಿ ಕಾರ್ಮಿಕರ ಮೂಲಕ 4 ಅಡಿ ಆಳದವರೆಗೆ ಉತ್ಖನನ ಮಡಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಈ ವೇಳೆ 4 ರಿಂದ 6 ಅಡಿಯಲ್ಲಿ ಮೃತದೇಹ ಹೂತಿಟ್ಟಿರುವುದಾಗಿ ದೂರುದಾರ ಸೂಚಿಸಿದ್ದಾನೆ. ಭಾರಿ ಮಳೆ, ನೀರಿನ ಒರತೆ ಕಾರಣ ಮೊದಲ ಸ್ಥಳದಲ್ಲಿ 4 ಅಡಿ ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗಿತ್ತು. ಜೆಸಿಬಿ ಮೂಲಕ 6 ಅಡಿ ಅಗೆದರೂ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇನ್ನುಳಿದ ಮೂರು ಸ್ಥಳಗಳನ್ನು ಕಾರ್ಮಿಕರ ಮೂಲಕ ಉತ್ಖನನ ಮಾಡಲಾಗಿದೆ.

ಧರ್ಮಸ್ಥಳದಲ್ಲಿ ತೀವ್ರಗೊಂಡ ಉತ್ಖನನ

ಧರ್ಮಸ್ಥಳದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಒಂದೆಡೆ ದೂರುದಾರನ ಜೊತೆ ಸ್ಥಳ ಮಹಜರು, ಗುರುತಿಸಿದ ಸ್ಥಳದ ಉತ್ಖನನ ನಡೆಯುತ್ತಿದೆ. ಮತ್ತೊಂದೆಡೆ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಔಟ್ ಪೋಸ್ಟ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರ ಪಟ್ಟಿಯನ್ನು ಕೇಳಿದೆ. ಧರ್ಮಸ್ಥದಲ್ಲಿ ಸಿಕ್ಕ ಅನಾಮಿಕ, ಅನಾಥ ಶವಗಳನ್ನು ಹೂತುಹಾಕುವಾಗ ಮಾಡಿದ ದಾಖಲೆ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಎಸ್ಐಟಿ ಕೆದಕುತ್ತಿದೆ.

ತನಿಖಾ ಸ್ಥಳಕ್ಕೆ ಎಸ್ಐಟಿ ಮುಖ್ಯಸ್ಥ ಮೊಹಂತಿ ಭೇಟಿ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆಯುತ್ತಿರುವ ತನಿಖಾ ಸ್ಥಳಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಮೊಹಂತಿ ಬಳಿಕ ರಸ್ತೆ ಮಾರ್ಗದ ಮೂಲಕ ನೇತ್ರಾವತಿ ಸ್ನಾನಘಟ್ಟದ ತನಿಖಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

 

 

PREV
Read more Articles on
click me!

Recommended Stories

ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?